News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಕತ್ತು ಕೊಯ್ದುಕೊಂಡು ಉದ್ಯೋಗಿ ಆತ್ಮಹತ್ಯೆ

Death 20072021
Photo Credit :

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬಟ್ಟೆ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ (29) ಎಂಬುವರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,

ಮಳಿಗೆಯಲ್ಲಿ ಕೆಲಸಕ್ಕೆ ಸೇರಿ, ಸಿದ್ದಾರ್ಥ್ ನಗರದಲ್ಲಿ ವಾಸವಿದ್ದರು. ಮೃತದೇಹದ ಬಳಿ ಮರಣಪತ್ರ ಸಿಕ್ಕಿದೆ. ಸಾವಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನನ್ನ ಸಾವಿಗೆ ನಾನೇ ಕಾರಣ’ ಎಂಬುದಾಗಿ ಮರಣಪತ್ರದಲ್ಲಿ ಬರೆಯಲಾಗಿದೆ. ಘಟನಾ ಸ್ಥಳ ಪರಿಶೀಲನೆ ನಡೆಸಿದಾಗ, ಇದೊಂದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕುಟುಂಬದವರೂ ಆತ್ಮಹತ್ಯೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ’ ಎಂದೂ ವಿವರಿಸಿದರು.ಈ ಬಗ್ಗೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’ತುಮಕೂರಿನ ಮೋಹನ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು.

‘ತಮ್ಮೂರಿನಲ್ಲಿ ಮನೆ ಕಟ್ಟಿಸಿದ್ದ ಮೋಹನ್, ಎರಡು ತಿಂಗಳ ಹಿಂದಷ್ಟೇ ಗೃಹಪ್ರವೇಶ ಕಾರ್ಯಕ್ರಮ ಮಾಡಿದ್ದರು. ಮನೆ ನಿರ್ಮಾಣಕ್ಕಾಗಿ ಸಾಲ ಮಾಡಿಕೊಂಡಿದ್ದರು. ವೇತನದ ಹಣದಲ್ಲಿ ಜೀವನ ನಡೆಸಿ, ಸಾಲದ ಕಂತು ತುಂಬುದು ಕಷ್ಟವಾಗಿತ್ತು. ಅದರಿಂದ ಮೋಹನ್ ಬೇಸತ್ತಿದ್ದರೆಂದು ತನಿಖೆಯಿಂದ ತಿಳಿದು ಬಂದಿದೆ’ ಎಂದೂ ಪೊಲೀಸರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು