ಬೆಂಗಳೂರು: ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬಟ್ಟೆ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ (29) ಎಂಬುವರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,
ಮಳಿಗೆಯಲ್ಲಿ ಕೆಲಸಕ್ಕೆ ಸೇರಿ, ಸಿದ್ದಾರ್ಥ್ ನಗರದಲ್ಲಿ ವಾಸವಿದ್ದರು. ಮೃತದೇಹದ ಬಳಿ ಮರಣಪತ್ರ ಸಿಕ್ಕಿದೆ. ಸಾವಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ನನ್ನ ಸಾವಿಗೆ ನಾನೇ ಕಾರಣ’ ಎಂಬುದಾಗಿ ಮರಣಪತ್ರದಲ್ಲಿ ಬರೆಯಲಾಗಿದೆ. ಘಟನಾ ಸ್ಥಳ ಪರಿಶೀಲನೆ ನಡೆಸಿದಾಗ, ಇದೊಂದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕುಟುಂಬದವರೂ ಆತ್ಮಹತ್ಯೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ’ ಎಂದೂ ವಿವರಿಸಿದರು.ಈ ಬಗ್ಗೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’ತುಮಕೂರಿನ ಮೋಹನ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು.
‘ತಮ್ಮೂರಿನಲ್ಲಿ ಮನೆ ಕಟ್ಟಿಸಿದ್ದ ಮೋಹನ್, ಎರಡು ತಿಂಗಳ ಹಿಂದಷ್ಟೇ ಗೃಹಪ್ರವೇಶ ಕಾರ್ಯಕ್ರಮ ಮಾಡಿದ್ದರು. ಮನೆ ನಿರ್ಮಾಣಕ್ಕಾಗಿ ಸಾಲ ಮಾಡಿಕೊಂಡಿದ್ದರು. ವೇತನದ ಹಣದಲ್ಲಿ ಜೀವನ ನಡೆಸಿ, ಸಾಲದ ಕಂತು ತುಂಬುದು ಕಷ್ಟವಾಗಿತ್ತು. ಅದರಿಂದ ಮೋಹನ್ ಬೇಸತ್ತಿದ್ದರೆಂದು ತನಿಖೆಯಿಂದ ತಿಳಿದು ಬಂದಿದೆ’ ಎಂದೂ ಪೊಲೀಸರು ಹೇಳಿದರು.