News Karnataka Kannada
Friday, May 10 2024
ಬೆಂಗಳೂರು ನಗರ

ಬೆಂಗಳೂರು; ಕುಡಿದ ಅಮಲಿನಲ್ಲಿ ಬಿದ್ದು ಯುವಕ ಸಾವು

Police in Mulubagil emptying a lake to investigate 8 years old murder case
Photo Credit :

ಬೆಂಗಳೂರು : ಕುಡಿದ ಅಮಲಿನಲ್ಲಿ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಆಯ ತಪ್ಪಿ ಸಿಮೆಂಟ್‌ ಇಟ್ಟಿಗೆ ಮೇಲೆ ಬಿದ್ದು ತೀವ್ರ ರಕ್ತಸ್ರಾವವಾಗಿ ಯುವಕ ಮೃತಪಟ್ಟಿರುವ ಘಟನೆ ಗೋವಿಂದರಾಜನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಗಡಿ ರಸ್ತೆಯ 5ನೇ ಕ್ರಾಸ್‌ನ ನಿವಾಸಿ ಉಮೇಶ್‌ (25) ಮೃತ ಯುವಕ. ಮಾಗಡಿ ರಸ್ತೆಯ ವೀರೇಶ್‌ ಚಿತ್ರಮಂದಿರದ ಸಮೀಪವಿರುವ ಲಕ್ಷೀ ಆಟೋ ಮೊಬೈಲ್ಸ್‌ ಶಾಪ್‌ ಬಳಿ ಘಟನೆ ನಡೆದಿದೆ.

ಉಮೇಶ್‌ ಗೂಡ್ಸ್‌ ಆಟೋ ಚಾಲಕನಾಗಿದ್ದು, ನಿತ್ಯ ಕೆಲಸ ಮುಗಿಸಿದ ನಂತರ ರಾತ್ರಿ ವೇಳೆ ಮದ್ಯ ಸೇವಿಸುವ ಚಟ ಹೊಂದಿದ್ದ. ಅದೇ ರೀತಿ ಬುಧವಾರ ರಾತ್ರಿ ಕೂಡ ಕಲ್ಯಾಣಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ. ರಾತ್ರಿ 10.30ರ ಸಮಯದಲ್ಲಿ ಮನೆಗೆ ಬರುವುದಾಗಿಯೂ ತಂದೆಗೆ ಕರೆ ಮಾಡಿ ತಿಳಿಸಿದ್ದ. ಆದರೆ, ಅತಿಯಾಗಿ ಮದ್ಯ ಸೇವಿಸಿದ ಉಮೇಶ್‌ ಮನೆಗೆ ನಡೆದು ಹೋಗುತ್ತಿದ್ದ ವೇಳೆ ಆಯಾ ತಪ್ಪಿ ಸಿಮೆಂಟ್‌ ಇಟ್ಟಿಗೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಮುಖ ಮತ್ತು ಬಾಯಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.

ಗುರುವಾರ ಮುಂಜಾನೆ ದಾರಿಹೋಕರು ಮೃತದೇಹ ನೋಡಿ ಪೊಲೀಸರಿಗೆ ಕೊಲೆಯಾಗಿದೆ ಎಂದು ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಕೊಲೆಯಲ್ಲ, ಯುವಕನೇ ಸಿಮೆಂಟ್‌ ಇಟ್ಟಿಗೆ ಮೇಲೆ ಬಿದ್ದು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು