News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರು : ಕೆ.ಆರ್.ಮಾರುಕಟ್ಟೆ ಸ್ಥಳಾಂತರ!

Market
Photo Credit :

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.

ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ. ಆದರೆ, ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.

ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು