ಬೆಂಗಳೂರು ನಗರ

ಬೆಂಗಳೂರು: ತಂಗಿಯ ಗಂಡನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಅಣ್ಣ

ಬೆಂಗಳೂರು : ಬೇರೆ ಧರ್ಮದ ಹುಡುಗನನ್ನು ಪ್ರೀತಿಸಿ ವಿವಾಹವಾಗಿದ್ದಕ್ಕೆ ತಂಗಿಯ ಬಾಳಿಗೆ ಕೊಳ್ಳಿ ಇಟ್ಟಿದ್ದಾನೆ ಬೆಂಗಳೂರಿನ ರೌಡಿ ಷೀಟರ್​ ಅಣ್ಣ. ತಂಗಿಯ ಗಂಡನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ರೌಡಿಶೀಟರ್​ ಜಿಲಾನಿ​. ಈತನ ಈ ಅಟ್ಟಹಾಸಕ್ಕೆ ಬಲಿಯಾದವನು ಯುವಕ ರಾಹುಲ್.

ಜಿಲಾನಿ ತಂಗಿ ಮತ್ತು ರಾಹುಲ್​ ಪ್ರೀತಿಸುತ್ತಿದ್ದರು. ಇದಕ್ಕೆ ತನ್ನ ಅಣ್ಣ ವಿರೋಧ ವ್ಯಕ್ತಪಡಿಸುತ್ತಾನೆ ಎಂದು ತಿಳಿದಿದ್ದ ಆಕೆ ಅಣ್ಣನಿಲ್ಲದ ವೇಳೆ ಮದುವೆಯಾಗಿದ್ದಳು. ಆದರೆ ಈ ವಿಷಯ ಆತನಿಗೆ ತಿಳಿದಿದೆ. ಇದರಿಂದ ಸಿಟ್ಟುಗೊಂಡ ಜಿಲಾನಿ ಸುಪಾರಿ ಕೊಟ್ಟು ತಂಗಿಯ ಗಂಡನನ್ನೇ ಕೊಲೆ ಮಾಡಿಸಿ, ಸಿಕ್ಕಿಬಿದ್ದಿದ್ದಾನೆ.

ಈತ ಇದಾಗಲೇ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ. ಇವನು ಜೈಲಿನಲ್ಲಿದ್ದಾಗ ತಂಗಿ ರಾಹುಲ್​ನನ್ನು ಮದುವೆಯಾಗಿದ್ದಾಳೆ. ಇದೇ ಆತನ ಸಾವಿಗೆ ಕಾರಣವಾಗಿವೆ. ಜೈಲಿನಲ್ಲಿ ಇರುವಾಗಲೇ ತಂಗಿ ಹಿಂದೂ ಯುವಕನನ್ನು ಮದುವೆಯಾಗಿರುವ ಸುದ್ದಿ ಈ ಪಾಪಿಗೆ ತಿಳಿದಿದೆ. ಅಲ್ಲಿಂದಲೇ ಸ್ಕೆಚ್​ ಹಾಕಿದ ಈತ ತನ್ನ ನಾಲ್ವರು ಸಹಚರರಿಗೆ ಹಣ ಕೊಟ್ಟು ಕೊಲೆಗೆ ಸುಪಾರಿ ಕೊಟ್ಟಿದ್ದಾನೆ.

ಅವರು ರಾಹುಲ್​ನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅರ್ಬಾಜ್ ಖಾನ್, ಶೋಹಿಬ್, ನಾಹೀಬ್, ಫೈಸಲ್ ಬಂಧಿತ ಆರೋಪಿಗಳು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago