ಬೆಂಗಳೂರು: ದಿ ಬೆಂಗಳೂರು ಬುಕ್ ಸೆಲ್ಲರ್ಸ್ ಮತ್ತು ಪಬ್ಲಿಷರ್ಸ್ ಅಸೋಸಿಯೇಷನ್ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಏಳು ದಿನಗಳ 14ನೇ ‘ಬೆಂಗಳೂರು ಪುಸ್ತಕ ಮೇಳ’ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು.
ವಿವಿಧ ಭಾಷೆ ಹಾಗೂ ಸಾಹಿತ್ಯ ಪ್ರಕಾರಗಳನ್ನೊಳಗೊಂಡ ಪುಸ್ತಕಗಳು ಒಂದೇ ಸೂರಿನಡಿಯಲ್ಲಿ ಅನಾವರಣಗೊಂಡಿದ್ದು, ರಿಯಾಯಿತಿ ದರದಲ್ಲಿ ಜನರಿಗೆ ತಲುಪಲಿದೆ.
‘ಪುಸ್ತಕಗಳ ಮಾರಾಟದಲ್ಲಿ ಶೇ 70ರಷ್ಟು ಕುಸಿತವಾಗಿದೆ. ಆನ್ಲೈನ್ನಲ್ಲಿ ಪುಸ್ತಕಗಳನ್ನು ಓದುವವರ ಸಂಖ್ಯೆ ಹೆಚ್ಚಾಗಿದೆ’ ಎನ್ನುತ್ತಾರೆ ಅಸೋಸಿಯೇಶನ್ ಅಧ್ಯಕ್ಷ ಎ.ಎನ್ ರಾಮಚಂದ್ರ.