ಬೆಂಗಳೂರು : ಪ್ರೌಢಶಾಲಾ ಶಿಕ್ಷಕರ ಅಂತರ್ ವಿಭಾಗದ ವರ್ಗಾವಣೆಯನ್ನು ತಾಂತ್ರಿಕ್ ಕಾರಣಗಳಿಂದ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಮೈಸೂರು ವಿಭಾಗದ ವರ್ಗಾವಣೆ ನಡೆಯಬೇಕಿತ್ತು.ಆದರೆ ಸರ್ವರ್ ತೊಂದರೆಯಿಂದ ಈ ದಿನದ ವರ್ಗಾವಣೆಯನ್ನು ಮುಂದೂಡಲ್ಪಟ್ಟಿದೆ. ಸದ್ಯದಲ್ಲೇ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಇನ್ನೂ 72,000 ಅರ್ಜಿಗಳು ವರ್ಗಾವಣೆ ಕೋರಿ ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ಶಿಕ್ಷಕ ಮಿತ್ರ ಅಪ್ಲಿಕೇಶನ್ ಮೂಲಕವೇ ನಿರ್ವಹಿಸಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪೂರ್ಣವಾಗಿ ಆನ್ ಲೈನ್ ಮೂಲಕವೇ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.