ಬೆಂಗಳೂರು : ರಿಹ್ಯಾಬಿಲೇಷನ್ ಸೆಂಟರ್ ನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತ ಯುವಕನನ್ನು 24 ವರ್ಷದ ಸುಭಾಷ್ ಪಾಂಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಡಿ ಜೆ ಹಳ್ಳಿ ನಿವಾಸಿಯಾಗಿದ್ದ ಸುಭಾಷ್ ಪಾಂಡಿ ಕೆಲ ವರ್ಷಗಳಿಂದ ಕುಡಿತದ ಚಟಕ್ಕೆ ಬಿದ್ದಿದ್ದ.
ಈ ಹಿನ್ನೆಲೆಯಲ್ಲಿ ಆತನ ಪೋಷಕರು ಕುಡಿತ ಬಿಡಿಸೋಕೆ ಅಂತ ಮಂಗನಪಾಳ್ಯದ ರಿಹ್ಯಾಬಿಲೇಷನ್ ಸೆಂಟರ್ ಗೆ ಸೇರಿಸಿದ್ದರು. ಆದರೆ, ನವೆಂಬರ್ 27 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಸಭಾಷ್ ನ ದೇಹ ಪತ್ತೆಯಾಗಿದೆ.
ತಕ್ಷಣ ರಿಹ್ಯಾಬಿಲೇಷನ್ ಸೆಂಟರ್ ನ ಸಿಬ್ಬಂದಿ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗನಿಗೆ ಏನೋ ಆಗಿದೆ ಅಂತ ತಿಳಿಸಿದ್ದಾರೆ. ಸ್ಥಳಕ್ಕೆ ಹೋದಾಗ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಸುಭಾಷ್ ಮೃತ ದೇಹ ಪತ್ತೆಯಾಗಿದೆ. ಸದ್ಯ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸ್ತಿರೋ ಪೋಷಕರು, ರಿಹ್ಯಾಬಿಲೇಷನ್ ಸೆಂಟರ್ ನಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿಲ್ಲ ಹಾಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
ಈ ಬಗ್ಗೆ ಬಂಡೆಪಾಳ್ಯ ಠಾಣೆಗೆ ದೂರು ನೀಡಿರುವ ಪೋಷಕರು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…