ಬೆಂಗಳೂರು,ಡಿ.24 : ಇಬ್ಬರು ಗಣ್ಯ ವ್ಯಕ್ತಿಗಳಿಗೆ ಲೋನ್ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ ಮೂರು ತಿಂಗಳ ಬಡ್ಡಿ ಹಣವನ್ನು ಪಡೆದು
ಚಿನ್ನ ಖರೀಸಿದ್ದ ಐದು ಮಂದಿಯನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಇಬ್ಬರು ಗಣ್ಯ ವ್ಯಕ್ತಿಗಳಿಗೆ ಕೋಟ್ಯಂತರ ರೂ. ಲೋನ್ ಕೊಡಿಸುವುದಾಗಿ ನಂಬಿಸಿ ನಂತರ ಅವರಿಂದ ಮೂರು ತಿಂಗಳ ಬಡ್ಡಿ ಹಣವನ್ನು ಮುಂಗಡವಾಗಿ ಪಡೆದ ನಂತರ ಆರೋಪಿಗಳು ದೂರುದಾರರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಇದರಿಂದ ಗಾಬರಿಗೊಂಡ ಗಣ್ಯ ವ್ಯಕ್ತಿಗಳು ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಸುದ್ದಗುಂಟೆಪಾಳ್ಯ ಪೊಲೀಸರು ಐವರನ್ನು ಬಂಧಿಸಿ, ಅವರು ಖರೀದಿಸಿದ್ದ ಕೋಟ್ಯಾಂತರ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.