News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕ

Dead
Photo Credit : Twitter

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ವೆಸ್ಟ್ ಬೆಂಗಾಲ್ ಮೂಲದ ವ್ಯಕ್ತಿಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.  44 ವರ್ಷದ ಕಾರ್ಮಿಕ ಕಿಶೋರ್ ತೂಪೊ ಬ್ರೈನ್ ಡೆಡ್ ಆಗಿದ್ದರು. ಹೀಗಾಗಿ ಅವರ ಕುಟುಂಬದವರು ಕಿಶೋರ್ ಅವರ ಅಂಗಾಂಗಗಳನ್ನು ದಾನ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಾ.ಕೆ.ಸುಧಾಕರ್, ಕಿಶೋರ್  ಅವರ ಮೂತ್ರಪಿಂಡಗಳು , ಹೃದಯ ಕವಾಟಗಳು ಮತ್ತು ಕಾರ್ನಿಯಾಗಳು ಅಗತ್ಯವಿರುವ ರೋಗಿಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ . ‘ ತನ್ನ ಮಗಳು ನರ್ಸಿಂಗ್ ಓದಬೇಕು ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇವೆ ಸಲ್ಲಿಸಬೇಕು ಎಂಬ ಕನಸನ್ನು ಕಿಶೋರ್ ಹೊಂದಿದ್ದರು.

ಅದೇ ಕನಸು ಅವರ ಅಂಗಗಳನ್ನು ದಾನ ಮಾಡಲು ಅವರ ಕುಟುಂಬವನ್ನು ಪ್ರೇರೇಪಿಸಿದೆ. ಹಿಂದುಳಿದ ಸಮುದಾಯಗಳ ಕುಟುಂಬಗಳು ಸಹ ಅಂಗಾಂಗ ದಾನಕ್ಕೆ ಮುಂದೆ ಬರುತ್ತಿರುವುದು ಸಂತಸದ ವಿಷಯ ಎಂದು ಸುಧಾಕರ್ ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು