ಬೆಂಗಳೂರು, ಡಿ.16 : ಸ್ನೇಹಿತೆ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಡಿಜೆ ಹಳ್ಳಿ ನಿವಾಸಿ ಅಜಿರಾ (26) ಬಂಧಿತ ಮಹಿಳೆ. ಅಜಿರಾ ತನ್ನ ಅಣ್ಣನ ಮದುವೆಯ ಆಮಂತ್ರಣ ಪತ್ರ ಕೊಡಲು ಜೆಜೆ ನಗರಕ್ಕೆ ಬಂದಿದ್ದಾಗ ಡಿ.14ರಂದು ಮಧ್ಯಾಹ್ನ 3.45ರಲ್ಲಿ ತನ್ನ ಜತೆ ಶಾಲೆಯಲ್ಲಿ ಓದಿದ್ದ ಸ್ನೇಹಿತೆ ಮನೆಗೆ ಹೋಗಿದ್ದಾರೆ.
ಗೃಹಿಣಿಯಾಗಿರುವ ಸ್ನೇಹಿತೆ ಜತೆ ಮಾತನಾಡುತ್ತ ಸ್ವಲ್ಪ ಸಮಯದ ಬಳಿಕ ಬಟ್ಟೆ ಬದಲಾಯಿಸುವುದಾಗಿ ಹೇಳಿ ಆಗಾಗ್ಗೆ ರೂಮಿಗೆ ಹೋಗಿ ಬಂದು ಮಾಡುತ್ತಿದ್ದಳು. ರಾತ್ರಿ 8.45ರಲ್ಲಿ ಊಟ ಮಾಡಿಕೊಂಡು ಮಹಿಳೆ ವಾಪಸ್ ಹೋಗಿದ್ದಳು. ಆಕೆಯ ವರ್ತನೆಯಿಂದ ಅನುಮಾನಗೊಂಡಿದ್ದ ಸ್ನೇಹಿತೆ ಬೀರು ತೆಗೆದು ನೋಡಿದಾಗ ಲಾಕರ್ನಲ್ಲಿಟ್ಟಿದ್ದ ಚಿನ್ನದ ಒಡವೆಗಳು ಕಳುವಾಗಿದ್ದು ಕಂಡು ತಕ್ಷಣ ಜೆಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇನ್ಸ್ಪೆಕ್ಟರ್ ಮಂಜು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿತೆಯನ್ನು ಬಂಧಿಸಿ ಸುಮಾರು 11 ಲಕ್ಷ ಬೆಲೆಯ 206 ಗ್ರಾಂ ತೂಕದ ಚಿನ್ನದ ಆಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.