News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು, ಹಾವೇರಿಯಲ್ಲಿ ಐಟಿ ದಾಳಿ: ಎರಡು ಕೋಟಿ ರೂ. ವಶ

Photo Credit :

ಬೆಂಗಳೂರು, ಹಾವೇರಿಯಲ್ಲಿ ಐಟಿ ದಾಳಿ: ಎರಡು ಕೋಟಿ ರೂ. ವಶ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರು ಹಾಗೂ ಹಾವೇರಿಯ ಕೆಲವೊಂದು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಲೆಕ್ಕಪತ್ರ ಸಹಾಯಕ ನಾರಾಯಣ ಗೌಡ ಪಾಟೀಲ ಅವರ ಹಾವೇರಿಯಲ್ಲಿರುವ ಬಾಡಿಗೆ ಮನೆ ಮತ್ತು ಬೆಂಗಳೂರಿನಲ್ಲಿ ಅವರು ಉಳಿದುಕೊಂಡಿದ್ದ ರಾಜಮಹಲ್ ಹೊಟೇಲ್ ಗೆ ದಾಳಿ ನಡೆಸಿದ್ದಾರೆ.

ಸುಮಾರು ಎರಡು ಕೋಟಿ ರೂ. ನಗದನ್ನು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದು ಎಲ್ಲಿಂದ ಬಂದ ಮತ್ತು ಯಾರಿಗೆ ಕೊಡಲು ತೆಗೆದಿರಿಸಲಾಗಿದ್ದ ಹಣ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ರಾಜಕಾರಣಿಗಳ ಚಲನವಲನದ ಬಗ್ಗೆ ನಿಗಾ ಇರಿಸಿಕೊಂಡು ದಾಳಿ ರೂಪಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು