ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಹೋಟೆಲ್ ಮಾಲೀಕ ಮಹೇಶ್ ಸ್ಥಿತಿ ಗಂಭೀರವಾಗಿದೆ. ಸದ್ಯ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನ ಚಂದ್ರಾಲೇಔಟ್ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಹೋಟೆಲ್ನಲ್ಲಿ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ಗ್ರೌಂಡ್ಫ್ಲೋರ್ನಲ್ಲಿ ಹೋಟೆಲ್ ಕಂ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಮಹೇಶ್ ಮಾತ್ರ ಇದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹೋಟೆಲ್ ಮಾಲೀಕ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.