ಬೆಂಗಳೂರು : ಇದುವರೆಗೆ ಮೊಬೈಲ್ ಅಂಗಡಿ ಸೇರಿದಂತೆ ಇತರೆ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದಂತ ಕಳ್ಳರು, ಈಗ ಐಷಾರಾಮಿ ಕೈಗಡಿಯಾರದ ಅಂಗಡಿಗಳಿಗೂ ಕನ್ನ ಹಾಕೋದಕ್ಕೆ ತೊಡಗಿದ್ದಾರೆ. ಹೀಗೆ ವಾಚ್ ಅಂಗಡಿಗೆ ಕನ್ನ ಹಾಕಿದಂತ ಕಳ್ಳರು ಕದ್ದಿದ್ದು ಮಾತ್ರ ಬರೋಬ್ಬರಿ 2 ಕೋಟಿ ಮೌಲ್ಯದ ಐಷಾರಾಮಿ ಕೈಗಡಿಯಾರಗಳನ್ನಾಗಿದೆ.
ಹೌದು.. ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯ ಅಂಗಡಿಯಿಂದ 2 ಕೋಟಿ ರೂ. ಮೌಲ್ಯದ ರಿಸ್ಟ್ ವಾಚ್ ಗಳನ್ನು ಕದಿಯಲಾಗಿದೆ. ಪುಲಕೇಶಿನಗರ (ಫ್ರೇಜರ್ ಟೌನ್) ನಿವಾಸಿ ಮತ್ತು ಜಿಮ್ಸನ್ ಟೈಮ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲೀಕ ಶಮೋಯೆಲ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ, ಬುಧವಾರ ಬೆಳಿಗ್ಗೆ 9 ಗಂಟೆಗೆ ಕಟ್ಟಡ ಮಾಲೀಕರು ಬಾಗಿಲು ತೆರೆದಾಗ, ಕಳ್ಳತದ ಪ್ರಕರಣ ಬೆಳಕಿಗೆ ಬಂದಿದ್ದಾಗಿ ತಿಳಿಸಿದ್ದಾರೆ.
ಶಮೋಯೆಲ್ ಅಂಗಡಿಗೆ ಹೋದಾಗ ಕಳ್ಳರು ಅಂಗಡಿಯ ಬಾಗಿಲು ಮುರಿದು, ಕೈಗಡಿಯಾರಗಳನ್ನು ಇರಿಸಿದ್ದ ಗಾಜಿನ ಕೇಸ್ ಗಳನ್ನು ಒಡೆದು ಕದ್ದಿರೋದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅವರ ದೂರಿನ ಪ್ರಕಾರ ಅಂಗಡಿಯಲ್ಲಿದ್ದಂತ ಎಲ್ಲಾ 129 ರಾಡೋ, 29 ಲಾಂಗೈನ್ಸ್ ಕದಿಯಲಾಗಿದೆ ಎನ್ನಲಾಗಿದೆ. ಈ ವಾಚ್ ಗಳ ಮೌಲ್ಯ ಸುಮಾರು 2 ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ.
ವಾಚ್ ಅಂಗಡಿ ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವಂತ ಇಂದಿರಾನಗರ ಠಾಣೆಯ ಪೊಲೀಸರು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…