ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಶಾಸಕ ಕೆ.ರಘುಪತಿ ಭಟ್ ಗೆ ಸಶಸ್ತ್ರ ಸಿಬ್ಬಂದಿ ಭದ್ರತೆ

ಬೆಂಗಳೂರು: ಹಿಜಾಬ್ ವಿಚಾರ ದೊಡ್ಡ ವಿವಾದಕ್ಕೆ ತಿರುಗಿದ ಬಳಿಕ ತನಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ, ಎಂದು ಬಿಜೆಪಿ ಶಾಸಕ ಕೆ.ರಘುಪತಿ ಭಟ್ ಹೇಳಿಕೆ ನೀಡಿದ ಬೆನ್ನಲ್ಲೇ ಅವರಿಗೆ ಸಶಸ್ತ್ರ ಸಿಬ್ಬಂದಿಯನ್ನು ಭದ್ರತೆಗೆ ಒದಗಿಸಲಾಗಿದೆ.

ಕರ್ನಾಟಕದಲ್ಲಿ ಹಿಜಾಬ್ ಸಮಸ್ಯೆ ಹುಟ್ಟಿಕೊಂಡ ಉಡುಪಿಯ ಮಹಿಳಾ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಭಟ್ ಅವರು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮಗೆ ಬಂದಿರುವ ಕರೆಗಳಲ್ಲಿ ಹೆಚ್ಚಿನವು ವಿದೇಶಗಳಿಂದ ಇಂಟರ್ನೆಟ್ ಕರೆಗಳಾಗಿವೆ. ಕರೆ ಮಾಡಿದವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಅದು ನನಗೆ ಹೊಸದಲ್ಲ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.

ರಘುಪತಿ ಭಟ್ ಅವರಿಗೆ ನೀಡಲಾಗುವ ಪ್ರಸ್ತುತ ಮಟ್ಟದ ಭದ್ರತೆಯನ್ನು ಸಾಮಾನ್ಯವಾಗಿ ಮಂತ್ರಿಗಳು ಅಥವಾ ಇತರ ರಾಜಕೀಯ ವಿಐಪಿಗಳಿಗೆ ನೀಡಲಾಗುತ್ತದೆ.

ಮುಂದಿನ ತನಿಖೆಯ ಆಧಾರದ ಮೇಲೆ ಶಾಸಕರ ನಿವಾಸಕ್ಕೆ ಶಸ್ತ್ರಸಜ್ಜಿತ ಕಾವಲುಗಾರರ ತಂಡವನ್ನು ನಿಯೋಜಿಸಿ 24 ಗಂಟೆಗಳ ಕಾಲ ಸಶಸ್ತ್ರ ರಕ್ಷಣೆ ನೀಡಬೇಕೇ ಎಂದು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಹಿಜಾಬ್ ವಿಚಾರದಲ್ಲಿ ಹೆಚ್ಚು ಮಾತನಾಡಿದರೆ ಅವರನ್ನು ಟಾರ್ಗೆಟ್ ಮಾಡಲಾಗುವುದು ಎಂದು ಎಚ್ಚರಿಸುತ್ತಲೇ ಬಂದಿದ್ದಾರೆ. ತನಗೆ ಸ್ಥಳೀಯ ಸಂಖ್ಯೆಗಳಿಂದ ಹಲವಾರು ಕರೆಗಳು ಬಂದಿವೆ ಮತ್ತು ಬೆಳವಣಿಗೆಯ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿಳಿಸಿದ್ದೇನೆ ಎಂದು ಭಟ್ ಹೇಳಿದರು.

Swathi MG

Recent Posts

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

7 mins ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

27 mins ago

ಖೂಬಾ ಲಿಂಗಾಯತ ಹೋರಾಟದ ವಿರೋಧಿ : ಓಂಪ್ರಕಾಶ ರೊಟ್ಟೆ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…

37 mins ago

ಜೆಡಿಎಸ್‌ ತೆನೆಹೊತ್ತ ಮಹಿಳೆ ಚಿಹ್ನೆ ಬದಲಿಸಲಿ : ಬಾಬುರಾವ್‌ ಪಾಸ್ವಾನ್‌

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಗ ಎಚ್‌.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…

52 mins ago

ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ದೊಡ್ಡದಿದೆ : ಎಂ.ಜಿ. ಮುಳೆ

ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ಬಹಳ ದೊಡ್ಡದಿದೆ' ಎಂದು ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ…

1 hour ago

ಬಿಪಿ-ಶುಗರ್ ರೋಗಿಗಳ ಅಡುಗೆಗೆ ಈ ಎಣ್ಣೆ ಉತ್ತಮ

ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಅತ್ಯಗತ್ಯ. ಹೆಚ್ಚಿನ ಭಾರತೀಯ ಆಹಾರ ಉತ್ಪನ್ನಗಳಲ್ಲಿ ತೈಲವು ಪ್ರಮುಖ ಅಂಶವಾಗಿದೆ. ಹೀಗಾಗಿ ಎಷ್ಟೋ ಜನ ಬಳಸುವ…

1 hour ago