ಬೆದರಿಕೆ ಹಿನ್ನೆಲೆ, ಕುನಾಲ್ ಕಮ್ರಾ ಕಾರ್ಯಕ್ರಮ ರದ್ದು

ಬೆಂಗಳೂರು : ಕಮೆಡಿಯನ್ ಮುನವರ್ ಫರೂಕಿಯ ನಂತರ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕುನಾಲ್ ಕಮ್ರಾ ಅವರ ಕಾರ್ಯಕ್ರಮ ರದ್ದುಗೊಂಡಿದೆ.

ಸಿಲಿಕಾನ್ ಸಿಟಿಯಲ್ಲಿ ನಡೆಯಬೇಕಿದ್ದ ತಮ್ಮ ಮುಂಬರುವ ಸ್ಟ್ಯಾಂಡ್-ಅಪ್ ಕಾರ್ಯಕ್ರಮಗಳ ಸಂಘಟಕರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಕುನಾಲ್ ಕಮ್ರಾ ಬುಧವಾರ ಹೇಳಿದ್ದಾರೆ.

ಮುನ್ನಾವರ್ ಫರುಕಿ ಅವರಿಗೆ ನಗರದಲ್ಲಿ ಪ್ರದರ್ಶನ ನೀಡಲು ಅನುಮತಿ ನಿರಾಕರಿಸಿದ ಕೆಲವೇ ದಿನಗಳಲ್ಲಿ ಕಮ್ರಾ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಹಿಂದೆ ಹಲವು ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಟೀಕಿಸಿರುವ ಕಮ್ರಾ, ನಗರದಲ್ಲಿ ನಡೆಯಲಿದ್ದ ತನ್ನ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಬಗ್ಗೆ ತನ್ನ ಅನುಯಾಯಿಗಳು ಮತ್ತು ವಿರೋಧಿಗಳಿಗೆ ತಿಳಿಸಲು ಟ್ವಿಟ್ಟರ್‌ನಲ್ಲಿ ವ್ಯಂಗ್ಯಾತ್ಮಕ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿಗರಿಗೆ ನಮಸ್ಕಾರಗಳು. ಮುಂದಿನ 20 ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲು ಬಹಳ ಸಂತೋಷವಾಗಿದೆ. ಎರಡು ಕಾರಣಗಳಿಗಾಗಿ ಅವುಗಳನ್ನು ರದ್ದುಗೊಳಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಆ ಎರಡು ಕಾರಣ ಏನೆಂಬುದನ್ನು ಬಹಳ ವ್ಯಂಗ್ಯವಾಗಿ ಹೇಳಿರುವ ಕುನಾಲ್, ಹೆಚ್ಚು ಕುಳಿತುಕೊಳ್ಳಬಹುದಾದ ಸ್ಥಳದಲ್ಲಿ 45 ಜನರನ್ನು ಕೂರಿಸಲು ನಾವು ವಿಶೇಷ ಅನುಮತಿಯನ್ನು ಪಡೆದಿಲ್ಲ. ಎರಡನೆಯದಾಗಿ, ಅಲ್ಲಿ ಪ್ರದರ್ಶನ ನೀಡಿದರೆ ಬೆದರಿಕೆ ಹಾಕಲಾಗಿದೆ. ಇದು ಸಹ ಕೋವಿಡ್‌ನ ಭಾಗವಾಗಿದೆ ಎಂದು ಭಾವಿಸಲಾಗುವುದು. ಕೋವಿಡ್ ಪ್ರೋಟೋಕಾಲ್ ಮತ್ತು ನೂತನ ಮಾರ್ಗಸೂಚಿಗಳನ್ನು ವೈರಸ್‌ನ ರೂಪಾಂತರದಂತೆ ನೋಡುತ್ತಿರುವುದಾಗಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

Gayathri SG

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

14 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

36 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

41 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

60 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago