ಬೆಂಗಳೂರು ;ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಂಭವಿಸಿದೆ.ಮೃತರನ್ನು ಬಾಲಗೇರಿ ನಿವಾಸಿಗಳಾದ ವೆಂಕಟೇಶ (33) , ಮೂರ್ತಿ (30) ಮತ್ತು ಅಚಲದೊಡ್ಡಿಯ ರಘು (19) ಎಂದು ಗುರುತಿಸಲಾಗಿದೆ.ರಾತ್ರಿ 9 ಗಂಟೆ ಸುಮಾರಿನಲ್ಲಿ ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಸಮೀಪದ ಮಹಿಳಾ ಪ್ರಥಮ ದರ್ಜೆ ಕಾಲೇಜು ಎದುರು ಒಂದು ಬೈಕ್ನಲ್ಲಿ ಇಬ್ಬರು, ಮತ್ತೊಂದು ಬೈಕ್ನಲ್ಲಿ ಒಬ್ಬರು ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ಗಳ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.