ಬೆಂಗಳೂರು : ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಬಂದ ನಂತ್ರ ಕ್ಯಾಬ್ ಟ್ಯಾಕ್ಸಿಗೆ ಬೇಡಿಕೆ ಕುಸಿತಗೊಂಡಿದೆ. ಸರ್ಕಾರ ಕೂಡಲೇ ಬೈಕ್ ಟ್ಯಾಕ್ಸಿ ಸ್ಕೀಮ್ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಬ್ ಚಾಲಕರು ಸಾರಿಗೆ ಸಚಿವ ಬಿ.ಶ್ರೀರಾಮುಲು ನಿವಾಸದ ಮುಂದೆ ಪ್ರತಿಭಟನೆ ಮಾಡಿದರು. ಅಲ್ಲದೇ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದರು.
ಇಂದು ಭಾರತ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್ ವತಿಯಿಂದ ಸಾರಿಗೆ ಸಚಿವ ಬಿ ಶ್ರೀರಾಮುಲು ನಿವಾಸ, ಸೆವೆನ್ ಮಿನಿಸ್ಟರ್ ಕ್ವಾರ್ಟಸ್ ಬಳಿಯಲ್ಲಿ ಧರಣಿ, ಪ್ರತಿಭಟನೆ ನಡೆಸಿದರು. ಈ ವೇಳೆ ಬೈಕ್ ಎಲೆಕ್ಟ್ರಿಕ್ ಟ್ಯಾಕ್ಸಿ ಸ್ಕೀಮ್ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಕ್ಯಾಬ್ ಗಳನ್ನು ಸಚಿವರ ನಿವಾಸದ ಮುಂದೆ ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಂತ ಟ್ಯಾಕ್ಸಿ ಚಾಲಕರನ್ನು ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚಿಸಿದ ವೇಳೆ, ಪೊಲೀಸರೊಂದಿಗೆ ವಾಗ್ವಾದ ಕೂಡ ನಡೆಸಲಾಯಿತು. ಅಲ್ಲದೇ ಸಚಿವರ ಮನೆಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದಂತ ಸಾರಿಗೆ ಸಚಿವ ಬಿ.ಶ್ರೀರಾಮಲು, Rapid ಬೈಕ್, ಟ್ಯಾಕ್ಸಿ ನಮ್ಮ ಗಮನಕ್ಕೆ ಬಂದಿದ್ದು, ಕ್ಯಾಬ್ ಚಾಲಕರಿಗೆ ಅನ್ಯಾಯವಾಗುತ್ತಿರೋದಾಗಿ ತಿಳಿದಿದೆ. ಕಾನೂನು ಸಲಹೆಗಾರರ ಸಲಹೆ ಪಡೆದು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ಶೀಘ್ರವೇ ಸರ್ಕಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ ನಂತ್ರ, ಪ್ರತಿಭಟನೆ ಕೈ ಬಿಟ್ಟು, ಸ್ಥಳದಿಂದ ಟ್ಯಾಕ್ಸಿ ಚಾಲಕರು ತೆರಳುವಂತೆ ಆಯಿತು.
ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…
ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…
ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…
ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್ಇಂಡೀಸ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನೊಂದಿಗೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್…
: ಕೆಕೆಆರ್ ವಿರುದ್ಧದ ಸೋಮವಾರದ ಐಪಿಎಲ್ ಪಂದ್ಯ ರದ್ದು ಗೊಂಡ ಕಾರಣ ಶುಭಮನ್ ಗಿಲ್ ಸಾರಥ್ಯದ ಗುಜರಾತ್ ಟೈಟಾನ್ಸ್ ತಂಡ…
ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…