ಬೆಂಗಳೂರು: ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಪುತ್ರನ ಬ್ಲಾಕ್ ಮೇಲ್ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ಬೆಂಗಳೂರು ನಗರ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈವರೆಗೆ ಜನಸಾಮಾನ್ಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಬ್ಲಾಕ್ ಮೇಲ್ ಮಾಡಿ ಹಣ ಪೀಕುತ್ತಿದ್ದಂತ ವಂಚಕರು, ಈಗ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಪುತ್ರನ ವೀಡಿಯೋ, ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ.
ಡಿ.27 ರಂದು ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ಬೆಂಗಳೂರು ನಗರ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.