ಬೆಂಗಳೂರು : ಭಾರತಕ್ಕೆ ಇಂದು ಹೆಮ್ಮೆಯ ದಿನ, ನೇತಾಜಿ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಪಾತ್ರ ದೊಡ್ಡದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನೋತ್ಸವ ಹಾಗೂ ಪರಾಕ್ರಮ ದಿನದ ಪ್ರಯುಕ್ತ ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನೇತಾಜಿ ಸುಭಾಷ್ ಚಂದ್ರಬೋಸ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ
ಅಜಾದ್ ಹಿಂದ್ ಫೌಜ್ ಕಟ್ಟಿ ಸುಮಾರು 60 ಸಾವಿರ ಯುವಕರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಹೋರಟಕ್ಕೆ ಭದ್ರ ಬುನಾದಿಯನ್ನು ಹಾಕಿದ್ದರು. ಇಂತಹ ಸುಭಾಷ್ ಚಂದ್ರ ಬೋಸ್ ದೇಶಭಕ್ತಿ ಹಾಗೂ ಅವರ ದೇಯದ ಬಗ್ಗೆ ಹೇಳಬೇಕು. ನೇತಾಜಿ ಅವರ ಕೃತಿಗಳನ್ನು ಕನ್ನಡದಲ್ಲಿ ಮುದ್ರಣ ಮಾಡುತ್ತೇವೆ. ವಿಧಾನಸೌಧದ ಆವರಣದಲ್ಲಿ ಸೂಕ್ತ ಸೂಕ್ತ ಸ್ಥಳ ನೋಡಿ ನೇತಾಜಿ ಪ್ರತಿಮೆ ಇಡುತ್ತೇವೆ ಎಂದರು.