ಬೆಂಗಳೂರು: ಲಾಕ್ ಡೌನ್ ಮೂರನೇ ಹಂತದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದರಿಂದ 40 ದಿನಗಳ ಬಳಿಕ ಕಂಠಪೂರ್ತಿ ಕುಡಿದ ಇಬ್ಬರು ಪ್ರಾಣ ಕಳಕೊಂಡಿರುವ ಘಟನೆಯು ನಡೆದಿದೆ.
ನಗರದ ಕಾಮಾಕ್ಷಿಪಾಲ್ಯದಲ್ಲಿ ಇಬ್ಬರು ಕುಡಿದು ಮೃತಪಟ್ಟ ಘಟನೆಯು ವರದಿಯಾಗಿದೆ. ದೇವದಾಸ ವಲಸೆ ಕಾರ್ಮಿಕ ಕಂಠಪೂರ್ತಿ ಕುಡಿದ ಬಳಿಕ ಚರಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಈತ ಪಶ್ಚಿಮ ಬಂಗಾಳದವನು ಎಂದು ತಿಳಿದುಬಂದಿದೆ.
ಈತ ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ತನ್ನ ಸ್ನೇಹಿತ ಸಮರ್ಥ ಎಂಬಾತನೊಂದಿಗೆ ಹೋಗಿ ಮದ್ಯ ಖರೀದಿ ಮಾಡಿ ಕುಡಿದಿದ್ದಾನೆ. ಈಗ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಆತನ ಕುಟುಂಬಸ್ಥರು ತಿಳಿಸಿದ್ದಾರೆ.
ಸಿದ್ದೇನಹಳ್ಳಿಯಲ್ಲಿ ಮತ್ತೊಂದು ಪ್ರಕರಣವು ದಾಖಲಾಗಿದೆ. ಕರಣ್ ಸಿಂಗ್ ಎಂಬಾತನನ್ನು ಆತನ ಸ್ನೇಹಿತನೇ ಕುಡಿದ ಅಮಲಿನಲ್ಲಿ ಹತ್ಯೆ ಮಾಡಿದ್ದಾನೆ.
ಕಲಾಸಿಪಾಳ್ಯದಲ್ಲಿ ಯುವಕನೊಬ್ಬನಿಗೆ ಕುಡಿಯಲು ಹಣ ನೀಡದೆ ಇರುವ ಹಿನ್ನೆಲೆಯಲ್ಲಿ ಆತ ಆತ್ನಹತ್ಯೆಗೆ ಯತ್ನಿಸಿರುವಂತಹ ಘಟನೆಯು ವರದಿಯಾಗಿದೆ. 23 ವರ್ಷದ ಹರೀಶ್ ಎಂಬಾತನಿಗೆ ಪೋಷಕರು ಕುಡಿಯಲು ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…
ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು…
ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…
ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…