ಮದ್ಯ ಮಾರಾಟ ದರ ಏರಿಸುವ ಯಾವುದೇ ಚಿಂತನೆಯಿಲ್ಲ: ಸಚಿವ ಕೆ.ಗೋಪಾಲಯ್ಯ

ಬೆಂಗಳೂರು: ಮದ್ಯ ಮಾರಾಟ ದರ ಏರಿಸುವ ಯಾವುದೇ ಚಿಂತನೆಯಿಲ್ಲ. ಆದಾಯ ಹೆಚ್ಚಳದ ಕುರಿತು ಬಜೆಟ್​ಗೆ ಮುನ್ನ ಮುಖ್ಯಮಂತ್ರಿ ಜತೆಗೆ ರ್ಚಚಿಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಕರೊನಾ ಸಂಕಷ್ಟದ ನಡುವೆಯೂ ಅಬಕಾರಿ ಇಲಾಖೆಯಿಂದ ರಾಜ್ಯದ ಬೊಕ್ಕಸಕ್ಕೆ ಗಮನಾರ್ಹ ಆದಾಯ ಸಂದಾಯವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ (2021-22) 25 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಗುರಿಯಿದ್ದು, ಈಗಾಗಲೆ 23,247 ಕೋಟಿ ರೂ. ಸಂಗ್ರಹವಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಅಬಕಾರಿ ಸಂಘ- ಸಂಸ್ಥೆಗಳೊಂದಿಗೆ ಬಜೆಟ್ ಪೂರ್ವ ಸಭೆ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು.

2022-23ನೇ ಸಾಲಿನ ಮುಂಗಡಪತ್ರ ಪೂರ್ವ ಅಬಕಾರಿ ಸಂಘ-ಸಂಸ್ಥೆಗಳ ಜತೆಗೆ ಸೌಹಾರ್ದಯುತ ಚರ್ಚೆಯಾಗಿದೆ. ಸಿಎಂ ಜತೆಗೆ ಅಬಕಾರಿ ಸಂಘಟನೆಗಳ ಬೇಡಿಕೆಗಳ ಬಗ್ಗೆ ಮತ್ತೊಮ್ಮೆ ರ್ಚಚಿಸುತ್ತೇವೆ ಎಂದರು.

ಅಬಕಾರಿ ಉದ್ಯಮದ ಸುಗಮ ಕಾರ್ಯನಿರ್ವಹಣೆ, ಬೊಕ್ಕಸಕ್ಕೆ ವರಮಾನದ ದೃಷ್ಟಿಯಿಂದ ಚಾಲ್ತಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನ್ನು ಪರಿಷ್ಕರಿಸಬೇಕು ಎಂದು ಕರ್ನಾಟಕ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್​ಹೆಗ್ಡೆ ಮೊರೆಯಿಟ್ಟಿದ್ದಾರೆ. ನಿರಂತರ ನಷ್ಟಕ್ಕೆ ಗುರಿಯಾಗಿರುವ ದ್ರಾಕ್ಷಾ ವೈನ್ ಮಾರಾಟಗಾರರಿಗೆ ಬಿಯರ್ ಮಾರಾಟ ಮಾಡಲು ಅನುಮತಿ ನೀಡಿ ಸಂಕಷ್ಟದಿಂದ ಪಾರು ಮಾಡಬೇಕು ಎಂದು ರಾಜ್ಯ ದ್ರಾಕ್ಷಾ ವೈನ್ ಮಾರಾಟಗಾರರ ಸಂಘ ಮನವಿ ಮಾಡಿದೆ.

Swathi MG

Recent Posts

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

3 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

27 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

44 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

56 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago