News Karnataka Kannada
Friday, May 03 2024
ಬೆಂಗಳೂರು ನಗರ

ಮಧು ಪತ್ತಾರ ಸಾವು ಪ್ರಕರಣ ಸಿಐಡಿಗೆ ಹಸ್ತಾಂತರ

Photo Credit :

ಮಧು ಪತ್ತಾರ ಸಾವು ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಅನುಮಾನಸ್ಪದವಾಗಿ ಭೀಕರ ಸ್ಥಿತಿಯಲ್ಲಿ ಪತ್ತೆಯಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣದ ತನಿಖೆಯನ್ನು ರಾಜ್ಯ ಗೃಹ ಇಲಾಖೆ ಸಿಐಡಿಗೆ ಒಪ್ಪಿಸಿದೆ. ಶನಿವಾರ ಸಂಜೆ ಗೃಹ ಇಲಾಖೆ ಈ ಆದೇಶವನ್ನು ಹೊರಡಿಸಿದೆ.

ರಾಯಚೂರು ಪೊಲೀಸರು ವಿದ್ಯಾರ್ಥಿನಿ ಸಾವು ಪ್ರಕರಣದ ದೂರನ್ನು ದಾಖಲಿಸಿಕೊಳ್ಳದೆ ತನಿಖೆಯನ್ನು ನಿರ್ಲಕ್ಷಿಸಿರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸಿ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಬೇಕೆಂದು ಒತ್ತಾಯಿಸಲಾಗಿತ್ತು.
ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ ಮಧು ಏ.13ರಂದು ನಾಪತ್ತೆಯಾಗಿದ್ದಳು. ಏ.16ರಂದು ಈಕೆಯ ಮೃತದೇಹ ಭೀಕರ ಸ್ಥಿತಿಯಲ್ಲಿ ನಗರದಲ್ಲಿ ಪತ್ತೆಯಾಗಿದ್ದು. ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ಸಂಬಂಧ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು