ಬೆಂಗಳೂರು: ಅನುಮಾನಸ್ಪದವಾಗಿ ಭೀಕರ ಸ್ಥಿತಿಯಲ್ಲಿ ಪತ್ತೆಯಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣದ ತನಿಖೆಯನ್ನು ರಾಜ್ಯ ಗೃಹ ಇಲಾಖೆ ಸಿಐಡಿಗೆ ಒಪ್ಪಿಸಿದೆ. ಶನಿವಾರ ಸಂಜೆ ಗೃಹ ಇಲಾಖೆ ಈ ಆದೇಶವನ್ನು ಹೊರಡಿಸಿದೆ.
ರಾಯಚೂರು ಪೊಲೀಸರು ವಿದ್ಯಾರ್ಥಿನಿ ಸಾವು ಪ್ರಕರಣದ ದೂರನ್ನು ದಾಖಲಿಸಿಕೊಳ್ಳದೆ ತನಿಖೆಯನ್ನು ನಿರ್ಲಕ್ಷಿಸಿರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸಿ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದರು. ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಬೇಕೆಂದು ಒತ್ತಾಯಿಸಲಾಗಿತ್ತು.
ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ ಮಧು ಏ.13ರಂದು ನಾಪತ್ತೆಯಾಗಿದ್ದಳು. ಏ.16ರಂದು ಈಕೆಯ ಮೃತದೇಹ ಭೀಕರ ಸ್ಥಿತಿಯಲ್ಲಿ ನಗರದಲ್ಲಿ ಪತ್ತೆಯಾಗಿದ್ದು. ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ಸಂಬಂಧ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.