ಬೆಂಗಳೂರು,ಮೇ.22: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ, ಗಾಳಿ, ಗುಡುಗು ಸಿಡಿಲಿನಂತಹ ಪ್ರಕೃತಿ ವಿಕೋಪದಿಂದ ಈವರೆಗೆ 252 ಜಾನುವಾರುಗಳು ಮೃತಪಟ್ಟದ್ದು. ಸಕಾಣಿಕೆ ರೈತರಿಗೆ ಎನ್ .ಡಿ.ಆರ್. ಎಫ್ . ಮಾರ್ಗಸೂಚಿಯಂತೆ ಕಂದಾಯ ಇಲಾಖೆಯಿಂದ ಪರಿಹಾರ ನೀಡಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಇಲಾಖೆಯ ಎಲ್ಲಾ ಅಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನಷ್ಠ ಉಂಟಾದ ಜಾನುವಾರು ಮಾಲೀಕರುಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮವಹಿಸುವಂತೆ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.
ಈ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿದ್ದು ಜಾನುವಾರುಗಳ ರಕ್ಷಣೆಯಲ್ಲಿ ಸನ್ನದ್ಧರಾಗಬೇಕಿದೆ ಎಂದು ಪಶು ಸಂಗೋಪನೆ ಸಚಿವ ಪ್ರಶು ಚವ್ಹಾಣ್ ಸೂಚಿಸಿದರು. ಪ್ರತಿನಿತ್ಯ ಮಳೆ, ಗಾಳಿ ಸಿಡಿಲಿನಿಂದ ಮೃತಪಟ್ಟ ಜಾನುವಾರಗಳ ಸಂಖ್ಯೆ ಎಷ್ಟು, ಎಷ್ಟು ಜಾನುವಾರುಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗಿದೆ ಎಂದು ಕೇಂದ್ರ ಕಚೇರಿಗೆ ಮಾಹಿತಿ ನೀಡಬೇಕೆಂದು ಇಲಾಖಾ ಪಶುವೈದ್ಯರುಗಳು, ಸಹಾಯಕ ನಿರ್ದೇಶಕರು ಹಾಗೂ ಉಪ ನಿರ್ದೇಶರಿಗೆ ಸೂಚಿಸಿರುವ ಸಚಿವರು, ಮುಂದೆ ಸಂಭವಿಸುವ ವಿಕೋಪಗಳ ನಿರ್ವಹಣೆಗೆ ಸನ್ನದ್ಧರಾಗಬೇಕು ಎಂದು ನಿರ್ದೇಶಿಸಿದರು.
ಯಾವುದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ವಿಕೋಪ ನಿರ್ವಹಣೆಯ ತುರ್ತು ಕಾರ್ಯಚರಣೆ ಕೈಗೊಳ್ಳಲು ಅನುಕೂಲವಾಗುವಂತೆ ಸನ್ನದ್ಧರಾಗಿರುವಂತೆ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಕೃತಿ ವಿಕೋಪದಿಂದ ಹಾನಿಗೊಳಲಾಗುವ ಜಾನುವಾರಗಳ ರಕ್ಷಣೆಗೆ ಮುಂದಾಗುವಂತೆ ಹಾಗೂ ಮೊದಲ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಈ ನಿಟ್ಟಿನಲ್ಲಿ ಪಶು ವೈದ್ಯಾಧಿಕಾರಿಗಳು, ಹಿರಿಯ ಅಧಿಕಾರಿಗಳು ಅಸಹಜವಾಗಿ ಸಾವೀಗಿಡಾಗುವ ಜಾನುವಾರುಗಳ ಮಾಲೀಕರು ಮತ್ತು ರೈತರಿಗೆ ಆರ್ಥಿಕ ಪರಿಹಾರ ನೀಡಲು ಕ್ರಮ ವಹಿಸಬೇತು. ಕ್ರಮ ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭು ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.
ಪಶು ವೈದ್ಯಾಕಾರಿಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಸಾಧ್ಯವಾಗದಿದ್ದರೇ ತುರ್ತು ಸಂದರ್ಭಗಳಲ್ಲಿ ಪಶು ಸಹಾಯವಾಣಿ 8277100200 ಮೂಲಕ ಸಂಪರ್ಕಿಸಿ, ದಿನದ 24 ಗಂಟೆಯೂ ಸೇವೆ ಪಡೆದುಕೊಳ್ಳಬಹುದಾಗಿದೆ.