ಬೆಂಗಳೂರು: ಪ್ರವಾಹ ಹಾಗೂ ಭಾರೀ ಮಳೆಯಿಂದಾಗಿ ಮನೆಗೆ ಶೇ.25ಕ್ಕಿಂತಲೂ ಹೆಚ್ಚು ಹಾನಿ ಆಗಿದ್ದರೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಘೋಷಣೆ ಮಾಡಿದರು.
ಮಳೆಯಿಂದಾಗಿ ಮನೆಗಳಿಗೆ ಶೇ.15ರಿಂದ 25ರಷ್ಟು ಹಾನಿಯಾಗಿದ್ದರೆ ಆಗ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು.