ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಬೆಂಗಳೂರು ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಸದನದಲ್ಲಿ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರು ಮಹಿಳೆಯರ ಅತ್ಯಾಚಾರದ ಬಗ್ಗೆ ಹಗುರವಾಗಿ ಹಾಗೂ ವ್ಯಂಗ್ಯವಾಗಿ ಮಾತನಾಡಿರುವುದನ್ನು ಖಂಡಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀ ಗೀತಾ ವಿವೇಕಾನಂದ ರವರು ಹಾಗೂ ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀ ರೇಖಾ ಗೋವಿಂದ ಅವರು ಬೆಂಗಳೂರು ಉತ್ತರ ಜಿಲ್ಲೆ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಆಶಾ ರಾವ್ ಹಾಗೂ ದಕ್ಷಿಣ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಆನಂದರವರು ಬೆಂಗಳೂರು ಮಹಾನಗರದ ಮಹಿಳಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು .
PHOTO AND NEWS CREDIT : G.Mohan, Photojournalist, Bengaluru