ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ಮಾಜಿ ಸಚಿವ ಆರ್. ಎಲ್. ಜಾಲಪ್ಪ ಸಹಿತ ಹಲವಾರು ಮಂದಿಯ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಗುರುವಾರ ದಾಳಿ ಮಾಡಿದೆ.
ಹಲವು ಜಿಲ್ಲೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ತಂಡಗಳು ಏಕಕಾಲಕ್ಕೆ ದಾಳಿ ಮಾಡಿವೆ. ಬೆಳಗ್ಗಿನಿಂದಲೇ ಸುಮಾರು 30 ತಂಡಗಳು ದಾಳಿ ಮಾಡಿವೆ ಎಂದು ಮೂಲಗಳು ಹೇಳಿವೆ.
ಕೋಲಾರ, ತುಮಕೂರು, ನೆಲಮಂಗಲ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಳಿ ನಡೆದಿದೆ.
ಪರಮೇಶ್ವರ್ ಅವರ ಸದಾಶಿವನಗರದ ಮನೆ, ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಜಾಲಪ್ಪ ಅವರ ಕೋಲಾರ ಮತ್ತು ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜುಗಳಲ್ಲಿ ಶೋಧ ನಡೆದಿದೆ.