ಬೆಂಗಳೂರು: 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡ ಸಿನಿಮಾದಲ್ಲಿ ಮಾರ್ಚ್ 03 ಮಹತ್ವದ ದಿನವಾಗಿದ್ದು ಈ ದಿನವನ್ನು ವಿಶ್ವ ಕನ್ನಡ ಸಿನಿಮಾ ದಿನವನ್ನಾಗಿ ಆಚರಿಸಲಾಗುವುದು ಎಂದರು.
ಇಂದಿಗೆ ಸರಿಯಾಗಿ 88 ವರ್ಷಗಳ ಹಿಂದೆ 1934 ರಲ್ಲಿ ಮಾರ್ಚ್ 03ರಂದೇ ಕನ್ನಡದ ಮೊದಲ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗಿತ್ತು. ಹಾಗಾಗಿ ಇದೇ ದಿನವನ್ನು ‘ವಿಶ್ವ ಕನ್ನಡ ದಿನ’ವನ್ನಾಗಿ ಘೋಷಿಸಲಾಗಿದೆ.
ಸಮಾರಂಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ”ಕನ್ನಡ ಚಿತ್ರರಂಗ ಉಳಿಯಬೇಕಾದರೆ ವಿಶೇಷ ಶ್ರಮವನ್ನು ನಾವು ಹಾಕಬೇಕಾಗುತ್ತೆ. ‘ಸ್ಪೆಶಲ್ ಎಫೆಕ್ಟ್’ ಜೊತೆಗೆ ‘ಸ್ಪೆಷಲ್ ಎಫರ್ಟ್’ ಸಹ ಬೇಕು. ಕನ್ನಡ ಉಳಿಸಲು ಸಿನಿಮಾಗಳ ಅಗತ್ಯವೂ ಇದೆ. ಪ್ರಸ್ತುತ ಹಲವು ಚಿತ್ರಂದಿರಗಳು ಮುಚ್ಚುತ್ತಿವೆ. ಚಿತ್ರಮಂದಿರಗಳು ಉಳಿಯಲು ಹೊಸ ತಂತ್ರಜ್ಞಾನದ ಚಿತ್ರರಂಗ ದೊರೆಯಬೇಕು. ಕುಟುಂಬದವರು ಮತ್ತೆ ಒಟ್ಟಾಗಿ ಬಂದು ಸಿನಿಮಾ ನೋಡುವಂತೆ ಮಾಡಬೇಕು. ಇದಕ್ಕೆ ಸರ್ಕಾರ ಎಲ್ಲರೀತಿಯ ಸಹಕಾರ ನಿಡಲಿದೆ ಎಂದು ಭರವಸೆಯನ್ನು ನೀಡಿದರು.
ಅಗಲಿದ ನಟ ಪುನೀತ್ ರಾಜ್ಕುಮಾರ್ ಅವರನ್ನು ನೆನೆದ ಸಿಎಂ, ”ಪುನೀತ್ ರಾಜ್ಕುಮಾರ್ ಅವರು, ಸಮಾಜಕ್ಕೆ ಮತ್ತು ಚಲನಚಿತ್ರ ರಂಗಕ್ಕೆ ಕೊಟ್ಟ ಕೊಡುಗೆ ದೊಡ್ಡದು, ಅವರ ಕೊಡುಗೆ ಶಾಶ್ವತವಾಗಿ ಉಳಿಯಲಿದೆ. ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನಿಡಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ” ಎಂದರು. ಜೊತೆಗೆ ಪುಟ್ಟಣ್ಣ ಕಣಗಾಲ್ ನಿವಾಸವನ್ನು ಸ್ಮಾರಕ ಮಾಡುವ ಬಗ್ಗೆಯೂ ಚರ್ಚಿಸುವುದಾಗಿ ಹೇಳಿದರು.
ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವವನ್ನು ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಭಾರತಿ ವಿಷ್ಣುವರ್ಧನ್, ಮಲಯಾಳಂ ಚಿತ್ರರಂಗದ ನಿರ್ದೇಶಕ ಪ್ರಿಯದರ್ಶನ್ ಇತರರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿದ್ದರು. ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಮುನಿರತ್ನ ಅವರುಗಳು ಸಹ ಹಾಜರಿದ್ದರು.
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ…
ಅಮೇಥಿ ಹಾಗು ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಾಂಗ್ರೆಸ್…
ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ…
'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…
ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು…
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…