ಬೆಂಗಳೂರು: ರಾಜ್ಯ ಸರ್ಕಾರವು ಮೀಸಲಾತಿಯಲ್ಲಿ ಶೇ.50ರಷ್ಟು ಹೆಚ್ಚಳ ಮಾಡಲು ಚಿಂತನೆ ಮಾಡಿದೆ.
ಈ ಬಗ್ಗೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದಿಂದ ಅಭಿಪ್ರಾಯ ಕೇಳಿತ್ತು. ಮಾರ್ಚ್ 22ರಂದು ರಾಜ್ಯ ಸಚಿವ ಸಂಪುಟವು ಮೀಸಲಾತಿಯಲ್ಲಿ ಶೇ.50ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ರಾಜ್ಯ ಸರ್ಕಾರವು ಲಿಖಿತವಾಗಿ ಈ ಬಗ್ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಹಲವಾರು ಜಾತಿ, ಸಮುದಾಯಗಳಿಂದ ಮೀಸಲಾತಿಗಾಗಿ ಒತ್ತಡವು ಬರುತ್ತಿರುವ ಹಿನ್ನೆಲೆಯಲ್ಲಿ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.