ಕರ್ನಾಟಕದಲ್ಲಿ ಎಂದೂ ಕಾಂಗ್ರೆಸ್ ಸ್ಪಿರಿಟ್ ಇದೆ. ಇದು ಅತ್ಯಂತ ನೈಸರ್ಗಿಕ ಕಾಂಗ್ರೆಸ್ ರಾಜ್ಯ. ಇಲ್ಲಿರುವುದು ಅನೈತಿಕ ಬಿಜೆಪಿ ಸರ್ಕಾರ. ಮುಂದೆ ಏನಾಗುತ್ತದೆ ಎಂಬ ಅರಿವು ಹೊಂದಬೇಕು. ನಾವು ಕಡಿಮೆ ಅಂತರದಿಂದ ಗೆಲ್ಲುವ ಗುರಿ ಇರಬಾರದು.
ಈ ಬಗ್ಗೆ ನಮಗೆ ಸ್ಪಷ್ಟತೆ ಇರಲಿ. ನಾವು 150 ಸೀಟ್ ಗೆಲ್ಲಲೇ ಬೇಕು, ಇದು ಕಷ್ಟ ಅಲ್ಲ. ನಾವು ಒಗ್ಗಟ್ಟಾಗಿ ಕೆಲಸ ಮಾಡಿದರೆ, ಸರಿಯಾದ ವಿಚಾರ ಕೈಗೆತ್ತಿಕೊಂಡರೆ ಗೆಲ್ಲಬಹುದು. ನಾವು ನಾಯಕರನ್ನ ಇಷ್ಟ ಕಷ್ಟದ ಆಧಾರ ಮೇಲೆ ಮಣೆ ಹಾಕೋಲ್ಲ.
ಯಾರು ಕೆಲಸ ಮಾಡ್ತಾ ಇದಾರೆ ಅನ್ನೋ ಆಧಾರದ ಮೇಲೆ ಕೆಲಸ ಮಾಡ್ತೀವಿ. ನಾವು ಈ ವಿಷಯದಲ್ಲಿ ಕಟ್ಟರ್ ಆಗಿದ್ದೇವೆ. 20 ವರ್ಷದ ಹಿಂದೆ ಏನ್ ಮಾಡಿದ್ದಾರೆ ಅನ್ನೋದು ನಡೆಯೋಲ್ಲ. ಇಂದು ಏನು ಮಾಡ್ತಾ ಇದಾರೆ, ಆತನಿಗೆ ಪಕ್ಷ ನಿಷ್ಠೆ ಇದೆಯಾ? ಕೆಲಸ ಮಾಡ್ತಾ ಇದಾರೆ ಅನ್ನೋದನ್ನ ಆಧರಿಸಿ ಪಕ್ಷ ಅವರ ರಕ್ಷಣೆ ಮಾಡುತ್ತೆ ಎಂದು ರಾಹುಲ್ ಹೇಳಿದರು.