ಬೆಂಗಳೂರು : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಂತದಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ಬಿ ಸಿ ನಾಗೇಶ್ ಹೇಳಿದರು.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಎನ್ ಇ ಪಿ ಜಾರಿಗೊಳಿಸುವಲ್ಲಿ ಪೂರ್ವ, ಪ್ರಾಥಮಿಕ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಮುಂದಿನ ಐದು ವರ್ಷದಲ್ಲಿ ಎನ್ ಇ ಪಿ ವ್ಯಾಪ್ತಿಗೆ ಒಳಪಡುವ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಲಾಗಿದೆ.
ಎನ್ ಇ ಪಿ ಜಾರಿಯಾಗಿರುವ ಕುರಿತು ರಚನೆಯಾಗಿರುವ 26 ಉಪ ಸಮಿತಿಗಳು ಡಿಸೆಂಬರ್ ಅಂತ್ಯದಲ್ಲಿ ವರದಿ ನೀಡಲಿದ್ದು, ವರದಿಯನ್ನು ಪರಿಶೀಲಿಸಿ ಮುಂದಿನ ವರ್ಷದಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲಿ ಎನ್ ಇ ಪಿ ಜಾರಿಗೊಳಿಸಲಾಗುವುದು ಎಂದು ನಾಗೇಶ್ ಹೇಳಿದ್ದಾರೆ.ಎನ್ ಇ ಪಿ ಜಾರಿಗೊಳಿಸಲು ಅಗತ್ಯವಾದ ಪಠ್ಯ ಕ್ರಮ ಹಾಗೂ ಪಠ್ಯ ಕ್ರಮ ಹಾಗೂ ಪಠ್ಯ ಕ್ರಮ ರಚನೆ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು. ಎನ್ ಇ ಪಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.