ಬೆಂಗಳೂರು : ರಾಜ್ಯ ಸರ್ಕಾರ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿತ್ತು.
ಆದರೆ ಈ ಬಾರಿ ಪಠ್ಯ ಕಡಿತ ಮಾಡಲ್ಲ ಎಂದು ಹೇಳಿದ್ದಾರೆ.ಕೋವಿಡ್ ನಿಂದ ಹಿಂದಿನ ಎರಡು ವರ್ಷ ಶೇ. 20 ರಷ್ಟು ಪಠ್ಯ ಕಡಿತ ಮಾಡಲಾಗಿತ್ತು. ಬೋಧಿಸಿದ ಶೇ. 80 ರಷ್ಟು ಪಠ್ಯಕ್ಕೆ ಪರೀಕ್ಷೆ ನಡೆಸಲಾಗಿತ್ತು.
ಆದರೆ ಈ ಬಾರಿ ಯಾವುದೇ ಪಠ್ಯ ಕಡಿತಗೊಳಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಸರ್ಕಾರ ಸೂಚನೆ ನೀಡಿದೆ.