ಬೆಂಗಳೂರು: ಕೇಂದ್ರ ಸಚಿವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಗೆ ಪ್ರಯಾಣಿಸಲಿರುವರು.
ಬೆಳಗ್ಗೆ 10.30ಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದ ಬಳಿಕ ಮುಖ್ಯಮಂತ್ರಿ ಅವರು ದೆಹಲಿಗೆ ಪ್ರಯಾಣಿಸಲಿರುವರು ಎಂದು ಮೂಲಗಳು ಹೇಳಿವೆ.
ಅವರು ಇಂದು ರಾತ್ರಿಯೇ ಬೆಂಗಳೂರಿಗೆ ಹಿಂತಿರುಗಲಿರುವರು. ಕೇಂದ್ರದ ಕೆಲವು ಸಚಿವರನ್ನು ಅವರು ಭೇಟಿ ಮಾಡಲಿದ್ದಾರೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಥವಾ ಇತರರನ್ನು ಭೇಟಿಯಾಗುವುದಿಲ್ಲ.