News Karnataka Kannada
Friday, May 03 2024
ಬೆಂಗಳೂರು ನಗರ

ಮೂರೇ ದಿನ ಮುಖ್ಯಮಂತ್ರಿಯಾಗಿ ಜಗದಾಂಬಿಕಾ ಪಾಲ್ ಸಾಲಿಗೆ ಸೇರಿದ ಯಡಿಯೂರಪ್ಪ!

Photo Credit :

ಮೂರೇ ದಿನ ಮುಖ್ಯಮಂತ್ರಿಯಾಗಿ ಜಗದಾಂಬಿಕಾ ಪಾಲ್ ಸಾಲಿಗೆ ಸೇರಿದ ಯಡಿಯೂರಪ್ಪ!

ಬೆಂಗಳೂರು: ಬಿಎಸ್ ಯಡಿಯೂರಪ್ಪನವರು ಬಿಜೆಪಿಗೆ ಬಹುಮತ ಸಿಗುವುದಿಲ್ಲವೆಂದು ಸ್ಪಷ್ಟಗೊಂಡ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಮಾಡುವ ಮೊದಲೇ ರಾಜೀನಾಮೆ ನೀಡಿ ಕೇವಲ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾದರು.

ಈ ಮೊದಲು ಉತ್ತರ ಪ್ರದೇಶದ ಜಗದಾಂಬಿಕಾ ಪಾಲ್ ಅವರು ಕೂಡ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 1998ರಲ್ಲಿ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರನ್ನು ರಾಜ್ಯಪಾಲರ ಉಚ್ಛಾಟನೆ ಮಾಡಿದಾಗ ಜಗದಾಂಬಿಕಾ ಪಾಲ್ ಅವರು ಮುಖ್ಯಮಂತ್ರಿಯಾಗಿದ್ದರು.

ಕಲ್ಯಾಣ್ ಸಿಂಗ್ ವಜಾ ಪ್ರಶ್ನಿಸಿ ಬಿಜೆಪಿ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ರಾಜ್ಯಪಾಲರ ತೀರ್ಮಾನ ರದ್ದು ಮಾಡಿತ್ತು. ಹೀಗಾಗಿ ಜಗದಾಂಬಿಕ ಪಾಲ್ ಅವರು ಕೇವಲ ಮೂರು ದಿನಗಳ ಕಾಲ ಮಾತ್ರ ಮುಖ್ಯಮಂತ್ರಿಯಾಗಿದ್ದರು.

ಇದೇ ಸಾಲಿಗೆ ಬಿಎಸ್ ಯಡಿಯೂರಪ್ಪ ಅವರು ಕೂಡ ಸೇರಿದ್ದಾರೆ. ಬಿಹಾರದ ಸತೀಶ್ ಪ್ರಸಾದ್ ಶರ್ಮಾ 5 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು