ಬೆಂಗಳೂರು: ಬಿಎಸ್ ಯಡಿಯೂರಪ್ಪನವರು ಬಿಜೆಪಿಗೆ ಬಹುಮತ ಸಿಗುವುದಿಲ್ಲವೆಂದು ಸ್ಪಷ್ಟಗೊಂಡ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಮಾಡುವ ಮೊದಲೇ ರಾಜೀನಾಮೆ ನೀಡಿ ಕೇವಲ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾದರು.
ಈ ಮೊದಲು ಉತ್ತರ ಪ್ರದೇಶದ ಜಗದಾಂಬಿಕಾ ಪಾಲ್ ಅವರು ಕೂಡ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 1998ರಲ್ಲಿ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರನ್ನು ರಾಜ್ಯಪಾಲರ ಉಚ್ಛಾಟನೆ ಮಾಡಿದಾಗ ಜಗದಾಂಬಿಕಾ ಪಾಲ್ ಅವರು ಮುಖ್ಯಮಂತ್ರಿಯಾಗಿದ್ದರು.
ಕಲ್ಯಾಣ್ ಸಿಂಗ್ ವಜಾ ಪ್ರಶ್ನಿಸಿ ಬಿಜೆಪಿ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ರಾಜ್ಯಪಾಲರ ತೀರ್ಮಾನ ರದ್ದು ಮಾಡಿತ್ತು. ಹೀಗಾಗಿ ಜಗದಾಂಬಿಕ ಪಾಲ್ ಅವರು ಕೇವಲ ಮೂರು ದಿನಗಳ ಕಾಲ ಮಾತ್ರ ಮುಖ್ಯಮಂತ್ರಿಯಾಗಿದ್ದರು.
ಇದೇ ಸಾಲಿಗೆ ಬಿಎಸ್ ಯಡಿಯೂರಪ್ಪ ಅವರು ಕೂಡ ಸೇರಿದ್ದಾರೆ. ಬಿಹಾರದ ಸತೀಶ್ ಪ್ರಸಾದ್ ಶರ್ಮಾ 5 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು.