News Karnataka Kannada
Saturday, May 04 2024
ಬೆಂಗಳೂರು ನಗರ

ಮೇಕೆದಾಟು ಕುರಿತ ತಮಿಳುನಾಡು ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ; ಎಚ್.ಡಿ ಕುಮಾರಸ್ವಾಮಿ

BJP is looting people's money in the name of development: HDK
Photo Credit :

ಬೆಂಗಳೂರು : ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ಬಿಲ್ ಪಾಸ್ ಮಾಡಿದ್ದಾರೆ. ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ, ಸರ್ಕಾರ ಬದ್ದತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಪಕ್ಕದ ರಾಜ್ಯಗಳ ಮೇಲೆ ಅದರಲ್ಲೂ ಕರ್ನಾಟಕದ ಮೇಲೆ ತಮಿಳುನಾಡು ಸರ್ಕಾರ ಒತ್ತಡ ಹೇರುವಂತದ್ದು ನಿರಂತರವಾಗಿ ನಡೆಯುತ್ತಿದೆ. ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರನ್ನು ಕುಡಿಯುವ ಹಕ್ಕಿದೆ. ಅವರ ನೀರನ್ನು ಕೊಡದಿದ್ದಾಗ ಅವರು ಕೇಳಬೇಕು ಎಂದರು.

ನಮ್ಮ ಭಾಗದಲ್ಲಿ ಜಲಾಶಯ ಕಟ್ಟಲು ತಕರಾರಿಲ್ಲ ಎಂದು ತಮಿಳುನಾಡು ವಕೀಲರು ಹೇಳಿದ್ದಾರೆ. ಕುಡಿಯುವ ನೀರಿಗೆ ಯಾವುದೇ ತಕಾರಾರಿಲ್ಲ ಎಂದು ಹೇಳಲಾಗಿದೆ. ನಮಗೆ ಎನ್ವಿರಾನ್ಮೆಂಟಲ್ ಕ್ಲಿಯರೆನ್ಸ್ ಬೇಕಾಗಿದೆ. ಸರ್ಕಾರದ ಕೈಯಲ್ಲಿದೆ. ನಮ್ಮ ನೀರನ್ನು ಪಡೆಯುವುದರಲ್ಲಿ ಅನ್ಯಾಯವಾಗಿದೆ, ಅದನ್ನು ಸರ್ಕಾರ ತ್ವರಿತಗತಿಯಲ್ಲಿ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ದೇವೆಗೌಡರು ಸರ್ಕಾರಕ್ಕೆ ಎರಡು ರೀತಿಯ ಸಲಹೆ ನೀಡಿದ್ದಾರೆ. ನಾನು ಕೂಡ ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ವಪಕ್ಷ ನಾಯಕರನ್ನು ದೆಹಲಿಗೆ ಕರೆದೊಯ್ಯುವ ವಿಚಾರವನ್ನು ಸಭೆಯಲ್ಲಿ ಹೇಳಿದ್ದಾರೆ ಮೊದಲು ಸೋಮವಾರ ಗೋವಿಂದ ಕಾರಜೋಳ ದೆಹಲಿಗೆ ಹೋಗಿದ್ದಾರೆ. ನಂತರ ಸಂಸದರ ನಿಯೋಗ ಭೇಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು