ಹುಬ್ಬಳ್ಳಿ :ಮೇಕೆದಾಟು ಪಾದಯಾತ್ರೆ ಪುನರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ಮಾಡುತ್ತೇವೆ. ಈಗಾಗಲೇ ಮಹದಾಯಿ ಪಾದಯಾತ್ರೆ ಸಂಬಂಧ ಪಕ್ಷದಲ್ಲಿ ಚರ್ಚೆ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಅರ್ಧಕ್ಕೆ ನಿಂತಿರುವ ಮೇಕದಾಟು ಪಾದಯಾತ್ರೆ ಪುನಾರಂಭವಾಗಲಿದ್ದು, ಮೇಕೆದಾಟು ಪಾದಯಾತ್ರೆ ಬಳಿಕ ಮಹದಾಯಿ, ಕೃಷ್ಣ ನದಿಗಳ ಯೋಜನೆ ಪೂರ್ಣಗೊಳಿಸಲು ಹಾಗೂ ಕಲ್ಯಾಣ ಕರ್ನಾಟಕದ 371 ಜೆ ಅಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.