ಮೇಕೆದಾಟು ಯೋಜನೆ ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಮೇಲ್ಮನವಿ ವಿಚಾರಣೆ

ಬೆಂಗಳೂರು : ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್‌ ನಡೆಸಲಿದೆ. ಅದ್ರಂತೆ, ಇಂದು ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಮೇಲ್ಮನವಿ ವಿಚಾರಣೆ ನಡೆಯಲಿದೆ. ಅಂದ್ಹಾಗೆ, ಎನ್‌ಜಿಟಿ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಈ ಮೇಲ್ಮನವಿಯನ್ನ ಸಲ್ಲಿಸಿದೆ.

ಚೆನ್ನೈ ಮೂಲದ ಪತ್ರಿಕೆಗಳ ವರದಿ ಆಧರಿಸಿ ಎನ್‌ಜಿಟಿ ದೂರು ದಾಖಲಿಸಿಕೊಂಡಿದ್ದು, ಯೋಜನೆ ಸಂಬಂಧ ಟ್ರಿಬ್ಯುನಲ್‌ ಸ್ವಯಂ ದೂರು ದಾಖಲಿಸಿಕೊಂಡಿತ್ತು. ಈ ಯೋಜನೆ ಜಾರಿಯಿಂದ ಅರಣ್ಯ ನಾಶವಾಗುತ್ತೆ ಎಂದು ಪತ್ರಿಕೆ ವರದಿ ಮಾಡಿತ್ತು. ನಂತ್ರ ಎನ್‌ಜಿಟಿಯಲ್ಲಿ ಯೋಜನೆ ಪರ ವಾದಿಸಿದ್ದ ಕರ್ನಾಟಕ, ಯೋಜನೆಯಿಂದ ಪರಿಸರಕ್ಕೆ ಹಾನಿಯಿಲ್ಲವೆಂದು ವಾದಿಸಿತ್ತು. ಈ ವಾದ ಪುರಸ್ಕರಿಸಿ ಕರ್ನಾಟಕದ ವಿರುದ್ಧ ಕೇಸ್‌ ರದ್ದುಪಡಿಸಿ ಆದೇಶ ಎನ್‌ಜಿಟಿ ನೀಡಿತ್ತು. ಆದ್ರೆ, ಈ ಸ್ವಯಂಪ್ರೇರಿತ ಕೇಸ್‌ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಅದ್ರಂತೆ, ಇಂದು ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಮೇಲ್ಮನವಿ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸಿ.ಟಿ ರವಿಕುಮಾರ್‌ ಮತ್ತು ನ್ಯಾ.ಖಾನ್ವಿಲ್ಕರ್‌ ನೇತೃತ್ವದ ಪೀಠದಲ್ಲಿ ಮೇಲ್ಮನವಿಯ ವಿಚಾರಣೆ ನಡೆಯಲಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago