ಬೆಂಗಳೂರು: ಮೂರು ಮಂದಿ ಸ್ವಚ್ಛತಾ ಕಾರ್ಮಿಕರು ಮ್ಯಾನ್ ಹೋಲ್ ಗೆ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಭಾನುವಾರ ಬೆಂಗಳೂರಿನಲ್ಲಿ ನಡೆದಿದೆ.
ಬೊಮ್ಮನಹಳ್ಳಿ ವ್ಯಾಪ್ತಿಯ ಬಂಡೇಪಾಳ್ಯ ಬಳಿಯ ಸೋಮಸಂದ್ರದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿನ ಅಪಾರ್ಟ್ ಮೆಂಟ್ ಒಂದರಲ್ಲಿ ಎಸ್ ಟಿಪಿ ಸ್ವಚ್ಛಗೊಳಿಸಲು ತೆರಳಿದ ಮೂರು ಮಂದಿ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ.
ಒಬ್ಬ ಕಾರ್ಮಿಕ ಮ್ಯಾನ್ ಹೋಲ್ ಒಳಗೆ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.