ಯಾವುದೇ ಕಾರಣಕ್ಕೂ ಸರ್ಕಾರ ಲಾಕ್‍ಡೌನ್‍ ನಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜನತೆ ಆತಂಕ ಪಡುವ ನಿಯಮಗಳನ್ನು ಜಾರಿ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ಲಾಕ್‍ಡೌನ್‍ ನಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಲಾಕ್‍ಡೌನ್ ಮೂಲಕ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಜನರಿಗೆ ಆರ್ಥಿಕ ನಷ್ಟ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರದ ಮುಂದೆ ಲಾಕ್‍ಡೌನ್ ಮಾಡುವಂತಹ ಪ್ರಸ್ತಾವನೆ ಇಲ್ಲ ಎಂದು ಪುನರುಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದನೆ ಮತ್ತು ಎರಡನೆ ಅಲೆ ವೇಳೆ ಲಾಕ್‍ಡೌನ್ ಜಾರಿ ಮಾಡಿದ ಪರಿಣಾಮ ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಅದರ ಅರಿವು ಕೂಡ ಸರ್ಕಾರಕ್ಕಿದೆ. ಹೀಗಾಗಿ ಲಾಕ್‍ಡೌನ್‍ನಂತಹ ನಿಯಮವಿಲ್ಲದೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗಗೊಳ್ಳುತ್ತೇವೆ. ಕೆಲವು ಕಡೆ ಟಫ್‍ರೂಲ್ಸ್ ಜಾರಿಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ನಾನು ಜನತೆಗೆ ಸ್ಪಷ್ಟ ಭರವಸೆ ಕೊಡುವುದೆಂದರೆ ಆತಂಕಕಾರಿಯಾಗುವ ನಿಯಮಗಳನ್ನು ಜಾರಿ ಮಾಡುವುದಿಲ್ಲ. ಲಾಕ್‍ಡೌನ್ ಪರಿಹಾರವಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಈ ಹಿಂದೆ ಎರಡು ಲಾಕ್‍ಡೌನ್‍ಗಳಿಂದ ನಮಗೆ ಸಮಸ್ಯೆಯಾಗಿದೆ ಎಂಬುದನ್ನು ಒಪ್ಪಿಕೊಂಡರು.

ವಾರಾಂತ್ಯದ ಕಫ್ರ್ಯೂ ಜಾರಿ ಮಾಡಿದರೂ ಸೋಂಕು ಕಡಿಮೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವಾರದಿಂದ ನಾವು ವೀಕೆಂಡ್ ಕಫ್ರ್ಯೂ ಜಾರಿ ಮಾಡಿದ್ದೇವೆ. ಏಳು ದಿನಕ್ಕೆ ಸೋಂಕು ಕಡಿಮೆಯಾಗುವುದಿಲ್ಲ. ಮೊದಲ ಎರಡು ಅಲೆಯಲ್ಲಿ 14 ದಿನಗಳ ಜೈನ್ ಇತ್ತು. ಆದರೆ, ಈ ಅಲೆಯಲ್ಲಿ ಸ್ವಲ್ಪ ಕಡಿಮೆ ಇದೆ. ಈ ಸೋಂಕು ಐದಾರು ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಇನ್ನೂ ಸ್ವಲ್ಪ ದಿನ ಹೋದರೆ ಇದರ ಫಲಿತಾಂಶ ನಮಗೆ ಲಭ್ಯವಾಗಲಿದೆ ಎಂದರು.

ರಾಜ್ಯದಲ್ಲಿ ಕೊರೊನಾ ಇನ್ನೂ ತುತ್ತತುದಿಗೆ ಹೋಗಬಹುದೆಂದು ತಜ್ಞರೇ ಹೇಳುತ್ತಿದ್ದಾರೆ. ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಈಗಿರುವ ಸಂಖ್ಯೆಗಿಂತ ಹೆಚ್ಚಾಗಬಹುದು. ಮೂರು ಮತ್ತು ನಾಲ್ಕನೆ ವಾರ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. ಸರ್ಕಾರ ಕೂಡ ಎಲ್ಲ ತ್ವರಿತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಶೇ.5 ರಿಂದ 6ರಷ್ಟು ಮಾತ್ರ ಸೋಂಕು ಪೀಡಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ವೈದ್ಯರು, ದಾದಿಯರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದು ನಮಗೆ ಆತಂಕ ಸೃಷ್ಟಿಸಿದೆ. ಹೀಗಾಗಿ ಮತ್ತಷ್ಟು ಎಚ್ಚರಿಕೆಯ ಅವಶ್ಯಕತೆ ಇದೆ ಎಂದು ಮನವಿ ಮಾಡಿದರು.

ಈ ತಿಂಗಳ ಅಂತ್ಯದವರೆಗೆ ಈಗಿರುವ ಮಾರ್ಗಸೂಚಿಗಳೇ ಮುಂದುವರಿಯಲಿವೆ. ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಬೂಸ್ಟರ್ ಡೋಸ್ ಪಡೆಯಲು ಯಾರು ಅರ್ಹರಿದ್ದಾರೋ ಅವರೆಲ್ಲ ಸ್ವಯಂಪ್ರೇರಿತರಾಗಿ ಪಡೆಯಬೇಕು. ಎರಡನೆ ಡೋಸ್ ಪಡೆದವರು ಸಹ ತಕ್ಷಣವೇ ನಿಮಗೆ ನಿಗದಿಪಡಿಸಿರುವ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಿ. ನಿರ್ಲಕ್ಷ್ಯ ಮಾಡಬೇಡಿ ಎಂದು ಹೇಳಿದರು.

ಒಂದೂವರೆ ತಿಂಗಳ ಕಾಲ ಸಭೆ-ಸಮಾರಂಭಗಳನ್ನು ಮುಂದೂಡಬೇಕು. ಸಮಾಧಾನಕರ ಸಂಗತಿ ಎಂದರೆ ಶೇ.5 ರಿಂದ 6ರಷ್ಟು ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇಂದು ಸೋಂಕು ಹೆಚ್ಚಳವಿರುವ ಜಿಲ್ಲೆಗಳ ಜತೆ ವಚ್ರ್ಯುಯಲ್ ಮೂಲಕ ಸಭೆ ನಡೆಸುತ್ತೇವೆ ಎಂದು ಸುಧಾಕರ್ ಮಾಹಿತಿ ನೀಡಿದರು.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

11 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago