ಬೆಂಗಳೂರು : ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ನಂತರ ಸೂರ್ಯಕಾಂತಿ ಎಣ್ಣೆಯ ಆಮದಿನ ಮೇಲೆ ಏಟು ಬಿದ್ದಿದೆ. ಇದರ ಪರಿಣಾಮ ಸೂರ್ಯಕಾಂತಿ ಎಣ್ಣೆಯ ಬೆಲೆಯು ಕೆಲವೇ ದಿನಗಳ ಅವಧಿಯಲ್ಲಿ ಲೀಟರ್ಗೆ ₹40ರಷ್ಟು ಏರಿಕೆಯಾಗಿದೆ. ರಾಜ್ಯದ ಹಲವೆಡೆ ಸೂಪರ್ ಮಾರ್ಕೆಟ್ಗಳಲ್ಲಿ ಗ್ರಾಹಕರಿಗೆ ಅಡುಗೆ ಎಣ್ಣೆ ಖರೀದಿ ಮೇಲೆಯೂ ಮಿತಿ ಹೇರಲಾಗಿದೆ.
ಹಲವು ಕಡೆಗಳಲ್ಲಿ ಅಡುಗೆ ಎಣ್ಣೆ ಖರೀದಿಗೆ ಗ್ರಾಹಕರಿಗೆ ಮಿತಿ ಹೇರಲಾಗಿದೆ. ಯುದ್ಧದ ಕಾರಣದಿಂದಾಗಿ ಸೂರ್ಯಕಾಂತಿ ಎಣ್ಣೆ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ದರ ಇನ್ನಷ್ಟು ಏರಿಕೆಯಾಗಬಹುದು ಎಂದು ಹೇಳಲಾಗಿದೆ.
ಯುದ್ಧದ ಹೆಸರಲ್ಲಿ ಕಾಳಸಂತೆಕೋರರು ಅಡುಗೆ ಎಣ್ಣೆ ದಾಸ್ತಾನು ಮಾಡಿಕೊಳ್ಳತೊಡಗಿದ್ದು, ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡತೊಡಗಿದ್ದಾರೆ ಎನ್ನಲಾಗಿದೆ. ದರ ಇನ್ನಷ್ಟು ಏರಿಕೆಯಾಗಬಹುದು ಎನ್ನುವ ಕಾರಣಕ್ಕೆ ಅನೇಕರು ಸೂರ್ಯಕಾಂತಿ ಎಣ್ಣೆ ಖರೀದಿಗೆ ಮುಗಿಬಿದ್ದಿದ್ದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. ಹೀಗಾಗಿ ಕೆಲವೆಡೆ ಖರೀದಿಗೆ ಮಿತಿ ಹೇರಲಾಗಿದೆ.