ಬೆಂಗಳೂರು: ಚಿಕಿತ್ಸೆಗೆಂದು ಬಂದ ಯುವತಿಯ ಜತೆಗೆ ಅನುಚಿತವಾಗಿ ವರ್ತಿಸಿದ ನಿವೃತ್ತ ಸರ್ಕಾರಿ ವೈದ್ಯರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಎರಡು ದಿನಗಳ ಮೊದಲು ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿಯ ಅಂಜನಾನಗರದಲ್ಲಿ ಈ ಘಟನೆ ನಡೆದಿದೆ. ಶಿವ ಕ್ಲಿನಿಕ್ ವೈದ್ಯ ಡಾ. ಬಿ. ಶಿವರಾಮ್ ಎಂಬವರು ಚಿಕಿತ್ಸೆಗೆ ಬಂದ ಯುವತಿಯನ್ನು ತಬ್ಬಿಕೊಂಡು ಮುತ್ತಿಕ್ಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ವೈದ್ಯರ ವರ್ತನೆ ಕಂಡು ಯುವತಿ ಬೊಬ್ಬೆ ಹಾಕಿದಾಗ ಸ್ಥಳೀಯರು ಅಲ್ಲಿಗೆ ಬಂದು ವೈದ್ಯರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ಯುವತಿ ಪೊಲೀಸರಿಗೆ ದೂರು ನೀಡಿದ್ದು, ವೈದ್ಯರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ವೈದ್ಯರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.