News Karnataka Kannada
Monday, April 29 2024
ಬೆಂಗಳೂರು ನಗರ

ಯೂಕ್ರೇನ್​ನಿಂದ ಆಗಮಿಸಿರುವ ಕನ್ನಡಿಗರಿಗೆ ಸರ್ಕಾರ ಸಹಕಾರ ನೀಡಲಿದೆ: ಸಿಎಂ ಬೊಮ್ಮಾಯಿ ಭರವಸೆ

Cm Bommayi
Photo Credit : News Kannada

ಬೆಂಗಳೂರು: ಯೂಕ್ರೇನ್​ನಿಂದ ಮುಂಬೈ ಅಥವಾ ದೆಹಲಿಗೆ ಶನಿವಾರ ಆಗಮಿಸಿರುವ ವಿದ್ಯಾಥಿರ್ಗಳನ್ನು ಬೆಂಗಳೂರಿಗೆ ಕರೆತಂದು ಅವರವರ ಊರುಗಳಿಗೆ ಕಳುಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಬರುವವರಿಗೆ ಸಾರಿಗೆ ಹಾಗೂ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಯೂಕ್ರೇನ್​ನಿಂದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ಶುಕ್ರವಾರ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್​ ಅವರೊಂದಿಗೆ ಮಾತನಾಡಿ ಪಟ್ಟಿಯನ್ನು ಸಹ ಕಳುಹಿಸಿಕೊಡಲಾಗಿದೆ.

ಯೂಕ್ರೇನ್​ ಪಶ್ಚಿಮ ಭಾಗದಲ್ಲಿರುವವರನ್ನು ರಸ್ತೆ ಮುಖಾಂತರ ಕರೆಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು. ಆ ಪ್ರಕಾರ ರೋಮಾನಿಯಾ ಮತ್ತಿತರ ಕಡೆಯಿಂದ ವಿದ್ಯಾಥಿರ್ಗಳು ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಹೆಚ್ಚಿನ ವಿದ್ಯಾಥಿರ್ಗಳು ಖಾರಖೈ ಎಂಬಲ್ಲಿದ್ದಾರೆ. ಅದು ಈಶಾನ್ಯ ಭಾದಲ್ಲಿದ್ದು ಅವರಿಗೆ ಸುರತ ಸ್ಥಳದಲ್ಲಿರಲು ಸೂಚಿಸಲಾಗಿದೆ. ಅನಾವಶ್ಯಕವಾಗಿ ರಸ್ತೆಗೆ ಬರುವುದನ್ನು ತಪ್ಪಿಸಲು ತಿಳಿಸಲಾಗಿದೆ. ನಮ್ಮ ಪ್ರಧಾನಿಗಳು ರಷ್ಯಾದ ಅಧ್ಯರೊಂದಿಗೆ ಮಾತನಾಡಿದ್ದು, ಭಾರತೀಯರನ್ನು ಸ್ಥಳಾಂತರ ಮಾಡಲು ಇರುವ ವಿಮಾನಗಳಿಗೆ ಸುರತ ಮಾರ್ಗವನ್ನು ಮಾಡಿಕೊಡುವಂತೆ ಕೋರಿದ್ದಾರೆ. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಯುದ್ಧದ ವಾತಾವರಣ ನಿಯಂತ್ರಣಕ್ಕೆ ಬಂದ ಮೇಲೆ ಆ ಪ್ರಕ್ರಿಯೆ ಕೂಡ ಪ್ರಾರಂಭವಾಗಲಿದೆ. ಕೆಲವೇ ದಿನಗಳಲ್ಲಿ ರಸ್ತೆ ಹಾಗೂ ವಿಮಾನಗಳ ಮೂಲಕ ನಮ್ಮ ವಿದ್ಯಾಥಿರ್ಗಳನ್ನು ಕರೆತರಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು