ಬೆಂಗಳೂರು: ಯೂಕ್ರೇನ್ನಿಂದ ಮುಂಬೈ ಅಥವಾ ದೆಹಲಿಗೆ ಶನಿವಾರ ಆಗಮಿಸಿರುವ ವಿದ್ಯಾಥಿರ್ಗಳನ್ನು ಬೆಂಗಳೂರಿಗೆ ಕರೆತಂದು ಅವರವರ ಊರುಗಳಿಗೆ ಕಳುಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಬರುವವರಿಗೆ ಸಾರಿಗೆ ಹಾಗೂ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಯೂಕ್ರೇನ್ನಿಂದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ಶುಕ್ರವಾರ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್ ಅವರೊಂದಿಗೆ ಮಾತನಾಡಿ ಪಟ್ಟಿಯನ್ನು ಸಹ ಕಳುಹಿಸಿಕೊಡಲಾಗಿದೆ.
ಯೂಕ್ರೇನ್ ಪಶ್ಚಿಮ ಭಾಗದಲ್ಲಿರುವವರನ್ನು ರಸ್ತೆ ಮುಖಾಂತರ ಕರೆಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು. ಆ ಪ್ರಕಾರ ರೋಮಾನಿಯಾ ಮತ್ತಿತರ ಕಡೆಯಿಂದ ವಿದ್ಯಾಥಿರ್ಗಳು ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಹೆಚ್ಚಿನ ವಿದ್ಯಾಥಿರ್ಗಳು ಖಾರಖೈ ಎಂಬಲ್ಲಿದ್ದಾರೆ. ಅದು ಈಶಾನ್ಯ ಭಾದಲ್ಲಿದ್ದು ಅವರಿಗೆ ಸುರತ ಸ್ಥಳದಲ್ಲಿರಲು ಸೂಚಿಸಲಾಗಿದೆ. ಅನಾವಶ್ಯಕವಾಗಿ ರಸ್ತೆಗೆ ಬರುವುದನ್ನು ತಪ್ಪಿಸಲು ತಿಳಿಸಲಾಗಿದೆ. ನಮ್ಮ ಪ್ರಧಾನಿಗಳು ರಷ್ಯಾದ ಅಧ್ಯರೊಂದಿಗೆ ಮಾತನಾಡಿದ್ದು, ಭಾರತೀಯರನ್ನು ಸ್ಥಳಾಂತರ ಮಾಡಲು ಇರುವ ವಿಮಾನಗಳಿಗೆ ಸುರತ ಮಾರ್ಗವನ್ನು ಮಾಡಿಕೊಡುವಂತೆ ಕೋರಿದ್ದಾರೆ. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಯುದ್ಧದ ವಾತಾವರಣ ನಿಯಂತ್ರಣಕ್ಕೆ ಬಂದ ಮೇಲೆ ಆ ಪ್ರಕ್ರಿಯೆ ಕೂಡ ಪ್ರಾರಂಭವಾಗಲಿದೆ. ಕೆಲವೇ ದಿನಗಳಲ್ಲಿ ರಸ್ತೆ ಹಾಗೂ ವಿಮಾನಗಳ ಮೂಲಕ ನಮ್ಮ ವಿದ್ಯಾಥಿರ್ಗಳನ್ನು ಕರೆತರಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.