News Karnataka Kannada
Saturday, April 27 2024
ಬೆಂಗಳೂರು ನಗರ

ಯೂಕ್ರೇನ್ ನಲ್ಲಿ ಬಲಿಯಾದ ಕನ್ನಡಿಗ ನವೀನ್ ​ ಸಾವಿಗೆ ಸಂತಾಪ ಸೂಚಿಸಿದ ಥಾವರ್ ಚಂದ್

Naveen
Photo Credit :

ಬೆಂಗಳೂರು : ಯೂಕ್ರೇನ್​ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಗುಂಡಿನ ದಾಳಿಗೆ ಬಲಿಯಾದ ಕನ್ನಡಿಗ ನವೀನ್ ಗ್ಯಾನಗೌಡರ​ ಸಾವಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಂತಾಪ ಸೂಚಿಸಿದ್ದಾರೆ.

ಯೂಕ್ರೇನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕದ ವಿದ್ಯಾರ್ಥಿ ನವೀನ್​ ನಿಧನದಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಗೆಹಲೋತ್ ಅವರು ಟ್ವೀಟ್​ ಮೂಲಕ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ನವೀನ್​ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳಿರುವುದಾಗಿ ರಾಜಭವನ ಟ್ವೀಟ್​ ಮಾಡಿದೆ.

ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕದ ವಿದ್ಯಾರ್ಥಿ ನವೀನ್ ನಿಧನದಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.  ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ, ಕಾರ್ಕಿವ್ ನಗರದಲ್ಲಿ ನವೀನ್​ ಎಂಬಿಬಿಎಸ್ ಓದುತ್ತಿದ್ದ. ಯೂಕ್ರೇನ್​ ಮೇಲೆ ರಷ್ಯಾ ಸೇನಾಪಡೆ ಯುದ್ಧ ಮುಂದುವರಿಸಿದ್ದು, ನಿನ್ನೆ ನಡೆದ ದಾಳಿಯಲ್ಲಿ ನವೀನ್​ ಮೃತಪಟ್ಟಿದ್ದಾರೆ.

ನಿನ್ನೆ ನಡೆದ ಘಟನೆಯನ್ನು ಮೃತ ನವೀನ್​ ಸ್ನೇಹಿತ ಆರ್​. ಗೌತಮ್​ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಲು ನವೀನ್​ ಜತೆ ನಾವೆಲ್ಲ ತೆರಳಿದ್ದೆವು. ಆ ಕ್ಷಣದಲ್ಲಿ ದಿಢೀರನೇ ಫೈರಿಂಗ್​ ಶುರುವಾಯಿತು. ನಮ್ಮನ್ನು ನಾವು ಕಾಪಾಡಿಕೊಳ್ಳಲು ಓಡೋಡಿ ಬರುತ್ತಿದ್ದೆವು. ಅಷ್ಟರಲ್ಲಿ ನವೀನ್​ ಮೇಲೆ ಗುಂಡಿನ ದಾಳಿ ಆಯಿತು. ಆತ ಸ್ಥಳದಲ್ಲೇ ಮೃತಪಟ್ಟ. ನಾವು ನವೀನ್​ ಸಮೀಪಕ್ಕೆ​ ತೆರಳಲು ಪ್ರಯತ್ನಿಸಿದೆವು. ಆದರೆ, ಗುಂಡಿನ ದಾಳಿ ಮುಂದುವರಿದರಿಂದ ನವೀನ್​ ಬಳಿ ತಲುಪಲ ನಮಗೆ ಸಾಧ್ಯವಾಗಲಿಲ್ಲ ಎಂದು ಗೌತಮ್​ ತಮ್ಮ ಅಸಹಾಯಕತೆ ಜತೆ ಮುಂದೇನಾಗುತ್ತೋ ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ.

ಯೂಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದಾಗಿನಿಂದ ಮಗ ಹುಟ್ಟೂರಿಗೆ ಸುರಕ್ಷಿತವಾಗಿ ಬಂದ್ರೆ ಸಾಕಪ್ಪ ಎಂದು ಪಾಕಲರು-ಕುಟುಂಬಸ್ಥರು ಕಣ್ಣೀರು ಹಾಕುತ್ತಾ ದೇವರ ಬಳಿ ಲೆಕ್ಕವಿಲ್ಲದಷ್ಟು ಬಾರಿ ಬೇಡಿಕೊಂಡಿದ್ದರು. ಆದರೂ ಮಗ ಬದುಕಲಿಲ್ಲ ಎಂಬ ಸುದ್ದಿ ಕೇಳಿ ನವೀನ್​ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು