ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆ ಪ್ರಶ್ನೆ ಪತ್ರಿಕೆ ಮೊದಲೇ ಸೋರಿಕೆಯಾಗಿದ್ದರಿಂದ ಸೋಮವಾರ ನಡೆದ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ.
ಕೋಲಾರ, ಬಳ್ಳಾರಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ರದ್ದಾಗಿರುವ ಪರೀಕ್ಷೆಯನ್ನು ಪಿಯುಸಿಯ ಎಲ್ಲಾ ಪರೀಕ್ಷೆಗಳು ಮುಗಿದ ನಂತರ ಅಂದರೆ ಮಾ.28ರ ನಂತರ ಮತ್ತೆ ನಡೆಸಲಾಗುವುದು. ಪರೀಕ್ಷೆ ಪ್ರಶ್ನಾ ಪತ್ರಿಕೆ ಹೇಗೆ ಸೋರಿಕೆಯಾಗಿದೆ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ರದ್ದಾಗಿರುವ ಪರೀಕ್ಷೆಯನ್ನು ಪಿಯುಸಿಯ ಎಲ್ಲಾ ಪರೀಕ್ಷೆಗಳು ಮುಗಿದ ನಂತರ ಅಂದರೆ ಮಾ.28ರ ನಂತರ ಮತ್ತೆ ನಡೆಸಲಾಗುವುದು. ದಿನಾಂಕವನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು. ಕೋಲಾರ, ಬಳ್ಳಾರಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ರಾಜ್ಯದ 975 ಕೇಂದ್ರಗಳಲ್ಲಿ ನಡೆದ ರಸಾಯನ ವಿಜ್ಞಾನ ಪರೀಕ್ಷೆಗೆ 1,74,901 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದೀಗ ಇವರೆಲ್ಲಾ ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗಿ ಬಂದಿದೆ.