ಬೆಂಗಳೂರು: ಹೊಸನಗರ ರಾಮಚಂದ್ರಾಫುರ ಮಠದಲ್ಲಿ ನಡೆದಿರುವ ಅವ್ಯವಹಾರದ ವಿಚಾರಣೆಯಿಂದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರು ಹಿಂದೆ ಸರಿದಿದ್ದಾರೆ.
ರಾಘವೇಶ್ವರ ಭಾರತೀ ಸ್ವಾಮೀಜಿ ಆಡಳಿತದಲ್ಲಿ ಮಠದಲ್ಲಿ ಅವ್ಯವಹಾರ ನಡೆದಿದೆ ಮತ್ತು ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ವಿಚಾರಣೆಯಿಂದ ಈಗ 15 ಜನ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ.
ನವಾಜ್ ಅವರು ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಇದನ್ನು ಬೇರೊಂದು ಪೀಠದಿಂದ ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಾರ್ ಗೆ ಸೂಚಿಸಲಾಗಿದೆ.