News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು; ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ

Cm Bommai
Photo Credit :

ಬೆಂಗಳೂರು : ಆರ್ಥಿಕತೆ ವೃದ್ಧಿಗೆ ಉತ್ತೇಜನ, ಪ್ರಮುಖ ಅಭಿವೃದ್ಧಿ ಚಟುವಟಿಕೆಗಳತ್ತ ರಾಜ್ಯ ಸರ್ಕಾರ ಗಮನಹರಿಸಿರುವ ನಡುವೆಯೇ ಕರೊನಾ ಮೂರನೇ ಅಲೆ ಸವಾಲು ಎದುರಾಗಿದ್ದು, ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿದೆ.

ತೆರಿಗೆ ವಿಕೇಂದ್ರೀಕರಣ ವ್ಯವಸ್ಥೆಯಡಿ ಮುಂಗಡವಾಗಿ 3,467.62 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಆತ್ಮಸ್ಥೈರ್ಯ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಬಿಡುಗಡೆಯಾದ ಒಟ್ಟು ಮೊತ್ತದಲ್ಲಿ ರಾಜ್ಯ ಪಾಲಿನ 2022ರ ಜನವರಿ ತೆರಿಗೆ ಕಂತು 1733.81 ಕೋಟಿ ರೂ ಸೇರಿದ್ದು, ಇಷ್ಟೇ ಮೊತ್ತವನ್ನು ಮುಂಗಡ ರೂಪದಲ್ಲಿ ನೀಡಿದೆ ಎಂದು ಬೊಮ್ಮಾಯಿ‌ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಸಕಾಲದಲ್ಲಿ ನೀಡಿದ ನೆರವಿನಿಂದ ಮಹತ್ವದ ಅಭಿವೃದ್ಧಿ ಕಾರ್ಯಗಳು, ಆರ್ಥಿಕತೆ ಹೆಚ್ಚಳ, ವಿಶೇಷವಾಗಿ ಕರೊನಾ ಮೂರನೇ ಅಲೆ ಸಮರ್ಥವಾಗಿ ನಿಭಾಯಿಸಲು ಅನುಕೂಲವಾಗಲಿದೆ ಎಂದು ಸಿಎಂ ‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು