ಬೆಂಗಳೂರು: ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆ ಘೋಷಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಶನಿವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಶಾಂತಿ ಮತ್ತು ಸುವ್ಯವಸ್ಥೆ ಅನ್ನು ಕಾಪಾಡುವ ಹಿತದೃಷ್ಟಿಯಿಂದ ಫೆಬ್ರವರಿ 12 ಮತ್ತು 13ರಂದು ಶನಿವಾರ ಮತ್ತು ಭಾನುವಾರದ ರಜೆಯ ಜೊತೆಗೆ ಫೆಬ್ರವರಿ 14 ಮತ್ತು 15ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಹಿಜಾಬ್ ಕೇಸರಿ ಶಾಲು ವಿವಾದ ಬಗೆಹರಿಯದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.